ನಾನು ಅಖಂಡ ಮಹಾರಾಷ್ಟ್ರದ ಮುಖ್ಯಮಂತ್ರಿ: ಶಿವಸೇನೆಗೆ ದೇವೇಂದ್ರ ಫಡ್ನವೀಸ್

ವಿದರ್ಭ ಪ್ರತ್ಯೇಕ ರಾಜ್ಯದ ವಿಷಯದಲ್ಲಿ ಶಿವಸೇನೆ ವಾಗ್ದಾಳಿಗೆ ಪ್ರತಿಕ್ರಿಯೆ ನೀಡಿರುವ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್, "ನಾನು ಅಖಂಡ ಮಹಾರಾಷ್ಟ್ರದ ಮುಖ್ಯಮಂತ್ರಿ" ಎಂದು ಹೇಳಿದ್ದಾರೆ.
ದೇವೇಂದ್ರ ಫಡ್ನವೀಸ್
ದೇವೇಂದ್ರ ಫಡ್ನವೀಸ್
Updated on

ಮುಂಬೈ: ಪ್ರತ್ಯೇಕ ವಿದರ್ಭ ರಾಜ್ಯದ ವಿಷಯದಲ್ಲಿ ಶಿವಸೇನೆ ವಾಗ್ದಾಳಿಗೆ ಪ್ರತಿಕ್ರಿಯೆ ನೀಡಿರುವ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್, "ನಾನು ಅಖಂಡ ಮಹಾರಾಷ್ಟ್ರದ ಮುಖ್ಯಮಂತ್ರಿ" ಎಂದು ಹೇಳಿದ್ದಾರೆ.  

ವಿಧಾನಸಭೆಯಲ್ಲಿ ವಿದರ್ಭ ವಿಷಯ ಪ್ರಸ್ತಾಪವಾದಾಗ ಮಾತನಾಡಿದ ಸಿಎಂ ದೇವೇಂದ್ರ ಫಡ್ನವೀಸ್ ಗೆ ವಿದರ್ಭ ಪ್ರತ್ಯೇಕ ರಾಜ್ಯದ ಕೂಗಿನ ಬಗ್ಗೆ ಸಿಎಂ ತಮ್ಮ ನಿಲುವನ್ನು ಸ್ಪಷ್ಟಪಡಿಸಬೇಕೆಂದು ಶಿವಸೇನೆ ಸದಸ್ಯರು ಆಗ್ರಹಿಸಿದರು, ಶಿವಸೇನೆಗೆ ಪ್ರತಿಕ್ರಿಯೆ ನೀಡಿರುವ ದೇವೇಂದ್ರ ಫಡ್ನವೀಸ್, ಪ್ರತ್ಯೇಕ ವಿದರ್ಭ ರಾಜ್ಯಕ್ಕೆ ಸರ್ಕಾರದ ಮುಂದೆ ಯಾವುದೇ ಪ್ರಸ್ತಾವನೆ ಇಲ್ಲ, ನಾನು ಅಖಂಡ ಮಹಾರಾಷ್ಟ್ರದ ಮುಖ್ಯಮಂತ್ರಿ, ಬಾಕಿ ಇರದ ವಿಷಯವನ್ನು ಚರ್ಚಿಸುವುದು ಸೂಕ್ತವಲ್ಲ ಎಂದು ದೇವೇಂದ್ರ ಫಡ್ನವೀಸ್ ತಿಳಿಸಿದ್ದಾರೆ.

ಬಿಜೆಪಿ ಸಣ್ಣ ರಾಜ್ಯಗಳ ರಚನೆ ಮಾಡುವುದರ ಪರವಾಗಿದ್ದರೆ, ಶಿವಸೇನೆ ಅದಕ್ಕೆ ವಿರುದ್ಧವಾಗಿದೆ, ಎರಡೂ ಪಕ್ಷಗಳು ಈಗ ಮಹಾರಾಷ್ಟ್ರದ ಸರ್ಕಾರದಲ್ಲಿವೆ, ವಿದರ್ಭ ರಾಜ್ಯ ರಚನೆ ಬಗ್ಗೆ ಸರ್ಕಾರ ಯಾವುದೇ ನಿಲುವು ಹೊಂದಿಲ್ಲ ಎಂದು ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com