ನಿನ್ನೆ ರಾಜ್ಯಸಭೆಯಲ್ಲಿ ಕಲಾಪ ಆರಂಭಗೊಳ್ಳುತ್ತಿದ್ದಂತೆ ಸದನದ ಬಾವಿಗಿಳಿದ ಸಂಸದೆ ಶಶಿಕಲಾ ಪುಷ್ಪ, ತಮಗೆ ಹೇಳಿಕೆ ನೀಡಲು ಅವಕಾಶ ನೀಡಬೇಕೆಂದು ಸಭಾಪತಿಗಳಿಗೆ ಮನವಿ ಮಾಡಿಕೊಂಡರು. ನಂತರ ಹಲವು ಬಾರಿ ಅಳುತ್ತಾ, ತಮಗೆ ತಮಿಳುನಾಡು ಸರ್ಕಾರದಿಂದ ಬೆದರಿಕೆಯಿದ್ದು, ನಾಯಕರೊಬ್ಬರು ಹೊಡೆದಿದ್ದಾರೆ ಎಂದು ಆಪಾದಿಸಿದ್ದರು.