ಮುಂಬೈ: ಮುಂಬೈ-ಗೋವಾ ಹೆದ್ದಾರಿಯಲ್ಲಿರುವ ಸಾವಿತ್ರಿ ನದಿಗೆ ಅಡ್ಡಲಾಗಿ ಕಟ್ಟಿರುವ ಬ್ರಿಟಿಷರ ಕಾಲದ ಸೇತುವೆ ನಿನ್ನೆ ತಡರಾತ್ರಿ ಕುಸಿದುಬಿದ್ದು ಸುಮಾರು 22 ಮಂದಿ ಕಣ್ಮರೆಯಾಗಿದ್ದಾರೆ. ಇನ್ನು ಎರಡು ಮುಂಬೈ ಮೂಲದ ಬಸ್ ಸೇರಿದಂತೆ 12ಕ್ಕೂ ಹೆಚ್ಚು ವಾಹನಗಳು ನೀರಿನಲ್ಲಿ ಕೊಚ್ಚಿಕೊಂಡು ಹೋಗಿವೆ.
ಅಧಿಕಾರಿಗಳು ಮತ್ತು ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ರಕ್ಷಣಾ ಕಾರ್ಯ ಸಮರೋಪಾದಿಯಲ್ಲಿ ನಡೆಯುತ್ತಿದೆ. ಆ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ರಕ್ಷಣಾ ಕಾರ್ಯಕ್ಕೆ ಅಡಚಣೆಯುಂಟಾಗುತ್ತಿದೆ.
ಇದುವರೆಗೆ ನೀರಿನಲ್ಲಿ ನಾಪತ್ತೆಯಾದವರು ಮತ್ತು ವಾಹನಗಳು ಕಾಣಿಸಿಕೊಂಡಿಲ್ಲ. ಸಾವಿತ್ತಿ ನದಿ ನೀರು ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಈಗ ಆ ಹೆದ್ದಾರಿಯಲ್ಲಿ ಭಾರೀ ಸಂಚಾರ ಅಡಚಣೆಯುಂಟಾಗಿದ್ದು, ಪ್ರಯಾಣಿಕರು ಹತ್ತಿರದ ಹೊಸ ಸೇತುವೆ ಮೂಲಕ ಸಂಚರಿಸಬೇಕಾದ ಅನಿವಾರ್ಯತೆ ಉಂಟಾಗಿದೆ.