ಉತ್ತರ ಪ್ರದೇಶದ ಬುಲಂದ್ ಶೆಹರ್ ಗ್ಯಾಂಗ್ ರೇಪ್ ಬಗ್ಗೆ ತಮ್ಮ ಬ್ಲಾಗ್ ನಲ್ಲಿ ಬರೆದುಕೊಂಡಿರುವ ಆಪ್ ಸಚಿವ, ಈ ರೀತಿ ಯಾವ ಸಮಯದಲ್ಲೂ, ಯಾರಿಗೆ ಬೇಕಾದರೂ ಆಗಬಹುದು ಎಂದು ಹೇಳಿದ್ದಾರೆ. ಅಲ್ಲದೆ ಇಂತಹ ಘಟನೆಗಳಿಂದ ರಕ್ಷಿಸಿಕೊಳ್ಳಲು ಮಹಿಳೆಯರ ಕೈಗೆ ಶಸ್ತ್ರಾಸ್ತ್ರ ನೀಡಿ, ತರಬೇತಿ ನೀಡಬೇಕು ಎಂದು ಸಲಹೆ ನೀಡಿದ್ದಾರೆ.