ಡೆಹ್ರಾಡೂನ್: ಬಿಜೆಪಿ ನಾಯಕ ಹರಕ್ ಸಿಂಗ್ ರಾವತ್ ಅವರ ವಿರುದ್ಧ ಅತ್ಯಾಚಾರ ಕೇಸ್ ದಾಖಲಿಸಲು ಉತ್ತರಾಖಂಡ್ ಮುಖ್ಯಮಂತ್ರಿ ಕಾರಣ ಎಂಬ ಸಂತ್ರಸ್ತೆಯ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಉತ್ತರಾಖಂಡ್ ಸಿಎಂ ಹರಿಶ್ ರಾವತ್ ರಾಜಿನಾಮೆಗೆ ಬಿಜೆಪಿ ಆಗ್ರಹಿಸಿದೆ. ಅಲ್ಲದೆ ಅವರಿಗೆ ಅಧಿಕಾರದಲ್ಲಿ ಮುಂದುವರೆಯುವ ನೈತಿಕತೆ ಇಲ್ಲ ಎಂದು ಗುರುವಾರ ಹೇಳಿದೆ.