ಗುವಾಹತಿ: ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರ ವಿರುದ್ಧ ಅಸ್ಸಾಂನ ಕಾಮ್ ರೂಪ್ ಮೆಟ್ರೊಪಾಲಿಟನ್ ಕೋರ್ಟ್ ಶನಿವಾರ ಸಮನ್ಸ್ ಜಾರಿ ಮಾಡಿದೆ.
ಆರ್ಎಸ್ಎಸ್ ವಿರುದ್ಧ ಅವಹೇಳನಕಾರಿ ಹೇಳಿ ನೀಡಿದ ಆರೋಪದ ಮೇಲೆ ಕಾಂಗ್ರೆಸ್ ಉಪಾಧ್ಯಕ್ಷರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಲಾಗಿತ್ತು. ವಿಚಾರಣೆ ನಡೆಸಿದ ಕೋರ್ಟ್ ಸೆಪ್ಟೆಂಬರ್ 29ರಂದು ವಿಚಾರಣೆಗೆ ಹಾಜರಾಗುವಂತೆ ರಾಹುಲ್ ಗಾಂಧಿಗೆ ಸಮನ್ಸ್ ಜಾರಿ ಮಾಡಿದೆ.
ಅಸ್ಸಾಂ ಭೇಟಿ ನೀಡಿದ್ದ ವೇಳೆ ಬರ್ಪೆಟ ದೇವಾಲಯ ಪ್ರವೇಶಿಸಲು ನಾನು ಬಯಸಿದ್ದೆ. ಆದರೆ ಆರ್ಎಸ್ಎಸ್ ಕಾರ್ಯಕರ್ತರು ನನ್ನನ್ನು ತಡೆದಿದ್ದರು ಎಂದು ಹೇಳಿದ್ದ ರಾಹುಲ್ ಗಾಂಧಿ ವಿರುದ್ಧ ಆರ್ಎಸ್ಎಸ್ ಕಾರ್ಯಕರ್ತ ಅಂಜನ್ ಬೋರಾ ಅವರು ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.