ಇದಕ್ಕೂ ಮುನ್ನ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ ಅವರು, ಜಿಎಸ್ಟಿ ಜಾರಿಯಿಂದಾಗಿ ಟ್ಯಾಕ್ಸ್ ಟೆರರಿಸಂಗೆ ತೆರೆ ಬೀಳಲಿದೆ ಮತ್ತು ಇನ್ನುಮುಂದೆ ಗ್ರಾಹಕನೇ ದೊರೆ ಎಂದು ಹೇಳಿದ್ದರು. ಅಲ್ಲದೆ ಜಿಎಸ್ ಟಿ ವಿಧೇಯಕ ಅಂಗೀಕಾರಕ್ಕೆ ಸಹಕರಿಸಿದ ಎಲ್ಲಾ ರಾಜಕೀಯ ಪಕ್ಷಗಳಿಗೆ ಧನ್ಯವಾದ ಹೇಳಿದ್ದರು.