ಇಂದು ಮಾಧ್ಯಮದವರ ಮುಂದೆ ಜೇನು ತುಪ್ಪ ಸೇವಿಸುವ ಮೂಲಕ 16 ವರ್ಷಗಳ ಸುದೀರ್ಘ ಉಪವಾಸ ಕೈಬಿಟ್ಟರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಇರೋಮ್ ಶರ್ಮಿಳಾ, ನನಗೆ ರಾಜಕೀಯ ಗೊತ್ತಿಲ್ಲ. ಆದರೆ ಕಳೆದ 16 ವರ್ಷದಿಂದ ಉಪವಾಸ ಸತ್ಯಾಗ್ರಹ ಮಾಡುತ್ತಿದ್ದರೂ ಯಾವುದೇ ಫಲ ಸಿಕ್ಕಿಲ್ಲ. ಹಾಗಾಗಿ ನಾನೀಗ ವಿಭಿನ್ನ ರೀತಿಯಲ್ಲಿ ಪ್ರತಿಭಟಿಸಲು ನಿರ್ಧರಿಸಿದ್ದೇನೆ. ಅದರಲ್ಲೊಂದು ನಾನು ಚುನಾವಣೆಗೆ ಸ್ಪರ್ಧಿಸಿ, ಮಣಿಪುರದ ಮುಖ್ಯಮಂತ್ರಿಯಾಗಿ, ಸೇನಾ ಪಡೆಗಳ ವಿಶೇಷ ಅಧಿಕಾರ ಕಾಯ್ದೆಯನ್ನು ರದ್ದುಪಡಿಸುವ ಇಚ್ಛೆ ನನ್ನದಾಗಿದೆ ಎಂದಿದ್ದಾರೆ.