ನವದೆಹಲಿ: ದಲಿತರ ವಿರುದ್ಧ ಗೋ ರಕ್ಷಕರು ದೌರ್ಜನ್ಯ ನಡೆಸಿರುವುದನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಖಂಡಿಸಿರುವ ಬೆನ್ನಲ್ಲೇ, ಆರ್ಎಸ್ಎಸ್ ಚಿಂತಕ ರಾಕೇಶ್ ಸಿನ್ಹಾ ಮಾತನಾಡಿ, ದಲಿತ ಸಮುದಾಯದವರನ್ನು ಒಗ್ಗೂಡಿಸಿ ಸಮಾಜದ ಮುಖ್ಯವಾಹಿನಿಗೆ ತರುವಲ್ಲಿ ಬಲ ಪಂಥೀಯ ಹಿಂದೂ ರಾಷ್ಟ್ರೀಯವಾದಿ ಗುಂಪುಗಳು ಉತ್ತಮ ಸೇವೆ ಮಾಡುತ್ತಿವೆ ಎಂದು ಹೇಳಿದ್ದಾರೆ. ಅಲ್ಲದೆ ದಲಿತರ ಮೇಲೆ ಹಲ್ಲೆ ನಡೆಸುವವರು ದೇಶ ವಿರೋಧಿಗಳು ಎಂದು ಪ್ರಧಾನಿ ಮಾತಿಗೆ ದನಿಗೂಡಿಸಿದ್ದಾರೆ.