ನವದೆಹಲಿ:ಸ್ವಾತಂತ್ರ್ಯ ದಿನಾಚರಣೆ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಬಲೂಚಿಸ್ತಾನ ವಿಷಯವನ್ನು ಪ್ರಸ್ತಾಪಿಸಿದ್ದಕ್ಕೆ ಮಾಜಿ ವಿದೇಶಾಂಗ ಸಚಿವ, ಕಾಂಗ್ರೆಸ್ ನಾಯಕ ಸಲ್ಮಾನ್ ಖುರ್ಷಿದ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಬಲೂಚಿಸ್ತಾನ ವಿಷಯವನ್ನು ಪ್ರಸ್ತಾಪಿಸಿರುವುದು, ಭಾರತದ ಆಂತರಿಕ ವಿಷಯಗಳಲ್ಲಿ ಮೂಗು ತೂರಿಸುವುದಕ್ಕೆ ಪಾಕಿಸ್ತಾನಕ್ಕೆ ಅವಕಾಶ ನೀಡಿದಂತಾಗುತ್ತದೆ ಎಂದು ಸಲ್ಮಾನ್ ಖುರ್ಷಿದ್ ಅಭಿಪ್ರಾಯಪಟ್ಟಿದ್ದಾರೆ. ಪಾಕ್ ಆಕ್ರಮಿತ ಕಾಶ್ಮೀರದ ವಿಷಯ ಬಲೂಚಿಸ್ತಾನದ ವಿಷಯಕ್ಕಿಂತ ಭಿನ್ನವಾದದ್ದು, ಪಾಕ್ ಆಕ್ರಮಿತ ಕಾಶ್ಮೀರದ ಬಗ್ಗೆ ಮಾತನಾಡಲು ಭಾರತಕ್ಕೆ ಸಂಪೂರ್ಣ ಹಕ್ಕಿದೆ. ಆದರೆ ಬಲೂಚಿಸ್ತಾನದ ಬಗ್ಗೆ ಮಾತನಾಡಲು ಅದು ನಮ್ಮ ವಿಷಯವಲ್ಲ ಎಂದು ಖುರ್ಷಿದ್ ಹೇಳಿದ್ದಾರೆ. ಬಲೂಚಿಸ್ತಾನ ಪಾಕಿಸ್ತಾನದ ಆಂತರಿಕ ವಿಷಯ. ಅದು ಸಾರ್ವಭೌಮ ರಾಷ್ಟ್ರದ ಆಂತರಿಕ ಪ್ರಶ್ನೆಯಾಗಿರುವುದರಿಂದ ನಾವು ಸಂಯಮದಿಂದ ಇರುವ ಅಗತ್ಯವಿದೆ ಎಂದು ಸಲ್ಮಾನ್ ಖುರ್ಷಿದ್ ಹೇಳಿದ್ದಾರೆ.
Advertisement