ಹುತಾತ್ಮರಾಗುವ ಕೆಲವೇ ನಿಮಿಷಗಳ ಮುನ್ನ ರಾಷ್ಟ್ರ ಧ್ವಜ ಹಾರಿಸಿದ್ದ ಕಮಾಂಡಂಟ್ ಪ್ರಮೋದ್ ಅಂತ್ಯಕ್ರಿಯೆ

'ಈ ದಿನ ನಮಗೆ ತುಂಬಾ ಮಹತ್ವದ ದಿನ'. ಇದು ಶ್ರೀನಗರದಲ್ಲಿ ರಾಷ್ಟ್ರ ಧ್ವಜ ಹಾರಿಸಿ ಕೆಲವೇ ನಿಮಿಷಗಳಲ್ಲಿ ಹುತಾತ್ಮರಾದ ಸಿಆರ್​ಪಿಎಫ್...
ಪ್ರಮೋದ್ ಕುಮಾರ್ ಗೆ ಅಂತಿಮ ನಮನ
ಪ್ರಮೋದ್ ಕುಮಾರ್ ಗೆ ಅಂತಿಮ ನಮನ
Updated on
ನವದೆಹಲಿ: 'ಈ ದಿನ ನಮಗೆ ತುಂಬಾ ಮಹತ್ವದ ದಿನ'. ಇದು ಶ್ರೀನಗರದಲ್ಲಿ ರಾಷ್ಟ್ರ ಧ್ವಜ ಹಾರಿಸಿ ಕೆಲವೇ ನಿಮಿಷಗಳಲ್ಲಿ ಹುತಾತ್ಮರಾದ ಸಿಆರ್​ಪಿಎಫ್ ಕಮಾಂಡಂಟ್ ಪ್ರಮೋದ್ ಕುಮಾರ್ ಅವರ ಕೊನೆಯ ಮಾತು. 
ಸ್ವಾತಂತ್ರ್ಯ ದಿನದಂದು ಜಮ್ಮು ಕಾಶ್ಮೀರದ ಶ್ರೀನಗರದಲ್ಲಿ ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ ಹುತಾತ್ಮರಾದ 44 ವರ್ಷದ ಪ್ರಮೋದ್ ಕುಮಾರ್ ಅವರ ಅಂತ್ಯಕ್ರಿಯೆ ಇಂದು ತವರೂರಾದ ಜಾರ್ಖಂಡ್​ನ ಜಂತರದಲ್ಲಿ ನೆರವೇರಿತು.
ಮಂಗಳವಾರ ಬೆಳಗ್ಗೆ ಜಂತರಕ್ಕೆ ತಲುಪಿದ ಹುತಾತ್ಮ ಪ್ರಮೋದ್ ಕುಮಾರ್ ಅವರ ಪಾರ್ಥೀವ ಶರೀರವನ್ನು ಕುಟುಂಬ ಸದಸ್ಯರಿಗೆ ಹಸ್ತಾಂತರಿಸಲಾಗಿತ್ತು.
ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಸೋಮವಾರ ಬೆಳಗ್ಗೆ 8.30ಕ್ಕೆ ಧ್ವಜಾರೋಹಣ ಮಾಡಿದ್ದ ಕುಮಾರ್ 8.40ರ ಸುಮಾರಿಗೆ ಭಾಷಣ ಮಾಡಿ, ಭಾರತ 70ನೇ ಸ್ವಾತಂತ್ರ್ಯೋತ್ವವನ್ನು ಆಚರಿಸುತ್ತಿದ್ದು, ರಕ್ಷಣಾ ಪಡೆಗಳ ಜವಾಬ್ದಾರಿ ಮತ್ತಷ್ಟು ಹೆಚ್ಚಿದೆ. ರಕ್ಷಣಾ ಪಡೆಗಳು ಉಗ್ರರನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುತ್ತಿವೆ ಮತ್ತು ಕಾಶ್ಮೀರ ಹಿಂಸಾಚಾರವನ್ನು ನಿಯಂತ್ರಿಸುವಲ್ಲೂ ಯಶಸ್ವಿಯಾಗಿವೆ ಎಂದು ಹೇಳಿದ್ದರು. ಅವರು ಭಾಷಣ ಮುಗಿಸಿ ಕೆಲವೇ ನಿಮಿಷಗಳಲ್ಲಿ ಉಗ್ರರು ಗ್ರೆನೇಡ್ ದಾಳಿ ನಡೆಸುತ್ತಿರುವ ಮಾಹಿತಿ ಬಂದಿದೆ. ಕೂಡಲೇ ಸ್ಥಳಕ್ಕೆ ಧಾವಿಸಿದ್ದಾರೆ. ಈ ವೇಳೆ ಉಗ್ರರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಸಿಆರ್​ಪಿಎಫ್ ಕಮಾಂಡಂಟ್  ಪ್ರಮೋದ್ ಕುಮಾರ್ ಹುತಾತ್ಮನಾಗಿದ್ದು, ಒಂಭತ್ತು ಮಂದಿ ಯೋಧರು ಗಾಯಗೊಂಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com