ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಸೋಮವಾರ ಬೆಳಗ್ಗೆ 8.30ಕ್ಕೆ ಧ್ವಜಾರೋಹಣ ಮಾಡಿದ್ದ ಕುಮಾರ್ 8.40ರ ಸುಮಾರಿಗೆ ಭಾಷಣ ಮಾಡಿ, ಭಾರತ 70ನೇ ಸ್ವಾತಂತ್ರ್ಯೋತ್ವವನ್ನು ಆಚರಿಸುತ್ತಿದ್ದು, ರಕ್ಷಣಾ ಪಡೆಗಳ ಜವಾಬ್ದಾರಿ ಮತ್ತಷ್ಟು ಹೆಚ್ಚಿದೆ. ರಕ್ಷಣಾ ಪಡೆಗಳು ಉಗ್ರರನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುತ್ತಿವೆ ಮತ್ತು ಕಾಶ್ಮೀರ ಹಿಂಸಾಚಾರವನ್ನು ನಿಯಂತ್ರಿಸುವಲ್ಲೂ ಯಶಸ್ವಿಯಾಗಿವೆ ಎಂದು ಹೇಳಿದ್ದರು. ಅವರು ಭಾಷಣ ಮುಗಿಸಿ ಕೆಲವೇ ನಿಮಿಷಗಳಲ್ಲಿ ಉಗ್ರರು ಗ್ರೆನೇಡ್ ದಾಳಿ ನಡೆಸುತ್ತಿರುವ ಮಾಹಿತಿ ಬಂದಿದೆ. ಕೂಡಲೇ ಸ್ಥಳಕ್ಕೆ ಧಾವಿಸಿದ್ದಾರೆ. ಈ ವೇಳೆ ಉಗ್ರರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಸಿಆರ್ಪಿಎಫ್ ಕಮಾಂಡಂಟ್ ಪ್ರಮೋದ್ ಕುಮಾರ್ ಹುತಾತ್ಮನಾಗಿದ್ದು, ಒಂಭತ್ತು ಮಂದಿ ಯೋಧರು ಗಾಯಗೊಂಡಿದ್ದರು.