ಹಲ್ಲೆಗೀಡಾದ 20 ಮಂದಿ ಭಾವನಗರ ಜಿಲ್ಲೆಯವರಾಗಿದ್ದು, ಉನಾಗೆ ಬೈಕ್ ನಲ್ಲಿ ತೆರಳಿದ್ದರು. ಜೆಎನ್ ಯು ವಿದ್ಯಾರ್ಥಿ ಸಂಘಟನೆ ನಾಯಕ ಕನ್ನಯ್ಯ ಕುಮಾರ್, ಹೈದರಾಬಾದ್ ನಲ್ಲಿ ಕಳೆದ ವರ್ಷ ಆತ್ಮಹತ್ಯೆ ಮಾಡಿಕೊಂಡ ದಲಿತ ವಿದ್ಯಾರ್ಥಿ ರೋಹಿತ್ ವೇಮುಲ ಅವರ ತಾಯಿ ರಾಧಿಕಾ ವೇಮುಲ ಮತ್ತು ಉನಾ ದಲಿತರ ಮೇಲಿನ ಹಲ್ಲೆ ಪ್ರಕರಣದಲ್ಲಿ ಹಲ್ಲೆಗೀಡಾದವನ ತಂದೆ ಬಾಲು ಸರ್ವೈಯ ಮೊದಲಾದವರು ಸೇರಿದ್ದ ನಿನ್ನೆಯ ಸ್ವಾತಂತ್ರ್ಯ ದಿನಾಚರಣೆ ತ್ರಿವರ್ಣ ಧ್ವಜ ಹಾರಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮನೆಗೆ ಮರಳುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ.