ಗುಂಟೂರು: ಬುಧವಾರ ನಸುಕಿನ ಜಾವ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕನಿಷ್ಟ ಮೂವರು ಮೃತಪಟ್ಟು, 15 ಮಂದಿ ಗಾಯಗೊಂಡಿರುವ ಘಟನೆ ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ಪಿದುಗುರಲ್ಲಾ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ. ಇನ್ನೂ ಮೂವರ ಸ್ಥಿತಿ ಗಂಭೀರವಾಗಿದೆ. ಖಾಸಗಿ ಬಸ್ಸು ನಿಲ್ಲಿಸಿದ್ದ ಲಾರಿಗೆ ಹೋಗಿ ಗುದ್ದಿ ಈ ಅವಘಡ ಸಂಭವಿಸಿದೆ.