ಕಾವೇರಿ ನದಿಗೆ ಅಡ್ಡಲಾಗಿ ಅಣೆಕಟ್ಟು ನಿರ್ಮಿಸುವ ಕರ್ನಾಟಕದ ಯೋಜನೆಯನ್ನು ತಡೆಗಟ್ಟಲು 2014ರಿಂದ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಕರ್ನಾಟಕ ಸರ್ಕಾರ ಮಾರ್ಚ್ 8ರಂದು ಸುಪ್ರೀಂ ಕೋರ್ಟ್ ಮುಂದೆ, ಕೋರ್ಟ್ ಗೆ ತಿಳಿಸದೆ ಯಾವುದೇ ಅಣೆಕಟ್ಟು ನಿರ್ಮಿಸುವ ಉದ್ದೇಶವಿಲ್ಲ ಎಂದು ಹೇಳಿತ್ತು. ಇದರ ಜೊತೆಗೆ ಮುಖ್ಯಮಂತ್ರಿ ಜಯಲಲಿತಾ ಈ ವಿಷಯವನ್ನು ಕೇಂದ್ರ ಸರ್ಕಾರದ ಬಳಿ ಕೊಂಡು ಹೋಗಿ ಹಿಂದಿನ ಪ್ರಧಾನಿ ಮನಮೋಹನ್ ಸಿಂಗ್ ಮತ್ತು ಇಂದಿನ ಪ್ರಧಾನಿ ನರೇಂದ್ರ ಮೋದಿಯವರಿಗೂ ವಿವರಿಸಿದ್ದಾರೆ ಎಂದು ಹೇಳಿದ್ದರು.