ಉತ್ತರ ಪ್ರದೇಶದಲ್ಲಿ ನಕಲಿ ಗೋರಕ್ಷಕನ ಬಂಧನ

ಗೋರಕ್ಷಣೆ ಹೆಸರಿನಲ್ಲಿ ಸುಲಿಗೆ, ಹಲ್ಲೆ ನಡೆಸುತ್ತಿದ್ದ ಆರೋಪದಲ್ಲಿ ಪಂಜಾಬ್ ಮೂಲದ ಗೋರಕ್ಷಕನೊಬ್ಬನನ್ನು ಉತ್ತರ ಪ್ರದೇಶದಲ್ಲಿ ಬಂಧಿಸಲಾಗಿದೆ.
ಉತ್ತರ ಪ್ರದೇಶದಲ್ಲಿ ನಕಲಿ ಗೋರಕ್ಷಕನ ಬಂಧನ
ಉತ್ತರ ಪ್ರದೇಶದಲ್ಲಿ ನಕಲಿ ಗೋರಕ್ಷಕನ ಬಂಧನ
Updated on

ಚಂಡೀಗಢ: ಗೋರಕ್ಷಣೆ ಹೆಸರಿನಲ್ಲಿ ಸುಲಿಗೆ, ಹಲ್ಲೆ ನಡೆಸುತ್ತಿದ್ದ ಆರೋಪದಲ್ಲಿ ಪಂಜಾಬ್  ಮೂಲದ ಗೋರಕ್ಷಕನೊಬ್ಬನನ್ನು ಉತ್ತರ ಪ್ರದೇಶದಲ್ಲಿ ಬಂಧಿಸಲಾಗಿದೆ.

ಬಂಧಿತ ನಕಲಿ ಗೋರಕ್ಷಕನನ್ನು ಸತೀಶ್ ಕುಮಾರ್ ಎಂದು ಗುರುತಿಸಲಾಗಿದ್ದು, ಆತನ ವಿರುದ್ಧ ಹಲ್ಲೆ ನಡೆಸಿದ, ಲೂಟಿ ಮಾಡಿರುವ ಆರೋಪಗಳಿವೆ. ಗೋರಕ್ಷಣೆ ಹೆಸರಿನಲ್ಲಿ ಸತೀಶ್ ಕುಮಾರ್ ನೇತೃತ್ವದ ಸಂಘಟನೆ ಗೋರಕ್ಷಣೆಯ ಹೆಸರಿನಲ್ಲಿ ಕಾನೂನನ್ನು ಕೈಗೆತ್ತಿಕೊಂಡು ಹಲ್ಲೆ, ಲೂಟಿ ನಡೆಸುತ್ತಿತ್ತು ಎಂದು ಪೊಲೀಸರು ಹೇಳಿದ್ದಾರೆ. ಸತೀಶ್ ಕುಮಾರ್ ಸಂಘಟನೆಯ ಸದಸ್ಯರು ಗೋರಕ್ಷಣೆಯ ವೇಳೆ ಜನರನ್ನು ಥಳಿಸುತ್ತಿದ್ದ ವಿಡಿಯೋ ಬಹಿರಂಗವಾಗಿದೆ. ಹಲ್ಲೆಗೊಳಗಾದವರು ಪೊಲೀಸರಿಗೆ ದೂರು ನೀಡಿದ ಹಿನ್ನೆಲೆಯಲ್ಲಿ ಸತೀಶ್ ಕುಮಾರ್ ನ್ನು ಬಂಧಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com