ಕೇಂದ್ರ ಕೌಶಲ ಅಭಿವೃದ್ಧಿ ಖಾತೆ ಸಚಿವ ರಾಜೀವ್ ಪ್ರತಾಪ್ ರೂಡಿ
ದೇಶ
ರಸ್ತೆ ಅಪಘಾತ: ಕೇಂದ್ರ ಸಚಿವ ರಾಜೀವ್ ಪ್ರತಾಪ್ ರೂಡಿ ಗಾಯ
ಕೇಂದ್ರ ಕೌಶಲ ಅಭಿವೃದ್ಧಿ ಖಾತೆ ಸಚಿವ ರಾಜೀವ್ ಪ್ರತಾಪ್ ರೂಡಿ ಅವರ ಅಪಘಾತಕ್ಕೀಡಾಗಿದ್ದು, ಪರಿಣಾಮ ಪ್ರತಾಪ್ ಅವರು ಗಾಯಗೊಂಡಿರುವ ಘಟನೆ...
ಪಾಟ್ನಾ: ಕೇಂದ್ರ ಕೌಶಲ ಅಭಿವೃದ್ಧಿ ಖಾತೆ ಸಚಿವ ರಾಜೀವ್ ಪ್ರತಾಪ್ ರೂಡಿ ಅವರ ಅಪಘಾತಕ್ಕೀಡಾಗಿದ್ದು, ಪರಿಣಾಮ ಪ್ರತಾಪ್ ಅವರು ಗಾಯಗೊಂಡಿರುವ ಘಟನೆ ಛಾಪ್ರಾದ ಸರಣ್ ಜಿಲ್ಲೆಯಲ್ಲಿ ಭಾನುವಾರ ನಡೆದಿದೆ.
ಕೆಲಸದ ನಿಮಿತ್ತ ರಾಜೀವ್ ಪ್ರತಾಪ್ ರೂಡಿ ಅವರು ಛಪ್ರಾದ ಸರಣ್ ಜಿಲ್ಲೆಗೆ ಹೋಗುತ್ತಿದ್ದರು. ಈ ವೇಳೆ ಕಾರು ಅಪಘಾತಕ್ಕೀಡಾಗಿ ಪ್ರತಾಪ್ ಅವರು ಗಾಯಗೊಂಡಿದ್ದಾರೆ. ಪ್ರತಾಪ್ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಪ್ರಸ್ತುತ ಪ್ರತಾಪ್ ಅವರು ಇದೀಗ ಆರೋಗ್ಯವಾಗಿದ್ದು, ಎಂದಿನಂತೆ ತಮ್ಮ ಕಾರ್ಯವೈಖರಿಯಲ್ಲಿ ತೊಡಗಿಕೊಂಡಿದ್ದಾರೆಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ