ಮುಂಬೈನಲ್ಲಿ ದೋಣಿ ಮುಳುಗಡೆ: 15 ಮೀನುಗಾರರ ರಕ್ಷಿಸಿದ ಕರಾವಳಿ ರಕ್ಷಣಾ ಪಡೆ

ಮುಂಬೈ ಕರಾವಳಿ ತೀರದಿಂದ 70 ನಾಟಿಕಲ್ ಮೈಲು ದೂರದಲ್ಲಿ ಮುಳುಗುತ್ತಿದ್ದ ಎರಡು ದೋಣಿಗಳಲ್ಲಿದ್ದ 15 ಮಂದಿ ಮೀನುಗಾರರನ್ನು ಕರಾವಳಿ ರಕ್ಷಣಾ ಪಡೆ ಸಿಬ್ಬಂದಿ...
ಕರಾವಳಿ ರಕ್ಷಣಾ ಪಡೆ
ಕರಾವಳಿ ರಕ್ಷಣಾ ಪಡೆ
Updated on

ಮುಂಬೈ: ಮುಂಬೈ ಕರಾವಳಿ ತೀರದಿಂದ 70 ನಾಟಿಕಲ್ ಮೈಲು ದೂರದಲ್ಲಿ ಮುಳುಗುತ್ತಿದ್ದ ಎರಡು ದೋಣಿಗಳಲ್ಲಿದ್ದ 15 ಮಂದಿ ಮೀನುಗಾರರನ್ನು ಕರಾವಳಿ ರಕ್ಷಣಾ ಪಡೆ ಸಿಬ್ಬಂದಿ ಕಾಪಾಡಿದ್ದಾರೆ.

ಕಳೆದ ರಾತ್ರಿ ಹಿಮಸಾಗರ್ ಮತ್ತು ಕೃಷ್ಣಸಾಗರ ದೋಣಿಗಳಲ್ಲಿದ್ದ 15 ಮಂದಿ ಮೀನುಗಾರರನ್ನು ಕಾರ್ಯಾಚರಣೆ ಮೂಲಕ ಸುರಕ್ಷಿತವಾಗಿ ರಕ್ಷಿಸಲಾಗಿದೆ ಎಂದು ಸೇನಾ ವಕ್ತಾರರು ಹೇಳಿದ್ದಾರೆ.

ಭಾರತೀಯ ನೌಕಾದಳದ ಹಡಗು ಗಂಗಾ ಮತ್ತು ಭಾರತೀಯ ಕರಾವಳಿ ರಕ್ಷಣಾ ಪಡೆ ಹಡಗು ಅಗ್ರಿಮ್ ಜತೆ ಎ ಸೀ ಕಿಂಗ್ 42ಬಿ ಹೆಲಿಕಾಫ್ಟರ್ ರಕ್ಷಣಾ ಕಾರ್ಯಾಚರಣೆ ಕೈಗೊಂಡಿದ್ದು ಎಲ್ಲಾ ಮೀನುಗಾರರನ್ನು ಸುರಕ್ಷಿತವಾಗಿ ರಕ್ಷಿಸಿದೆ.

ನಿನ್ನೆ ಸಂಜೆ ಹಿಮಸಾಗರ್ ಮತ್ತು ಕೃಷ್ಣಸಾಗರ್ ದೋಣಿಯಲ್ಲಿ 15 ಮಂದಿ ಮೀನುಗಾರರು ಮೀನು ಹಿಡಿಯಲು ತೆರಳಿದ್ದು ರಾತ್ರಿಯಾದರೂ ಬಾರದೆ ಇದ್ದಿದ್ದರಿಂದ ಮೀನುಗಾರರನೊಬ್ಬ ಕರಾವಳಿ ರಕ್ಷಣಾ ಪಡೆಗೆ ವಿಷಯ ಮುಟ್ಟಿಸಿದ ನಂತರ ಕಾರ್ಯಾಚರಣೆ ಕೈಗೊಳ್ಳಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com