ಉಗ್ರಗಾಮಿ ನಾಯಕ ಬುರ್ಹಾನ್ ವಾನಿಯ ಹತ್ಯೆಯ ನಂತರ ಕಾಶ್ಮೀರದಲ್ಲಿ ಭುಗಿಲೆದ್ದ ಹಿಂಸಾಚಾರ, ಗಲಭೆ 46 ದಿನಗಳಾದರೂ ಇನ್ನೂ ನಿಂತಿಲ್ಲ. ಇದುವರೆಗೆ 68 ಮಂದಿ ಮೃತಪಟ್ಟಿದ್ದಾರೆ. ಮೆಹಬೂಬ ಮುಫ್ತಿ ಸರ್ಕಾರ ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ವಿಫಲವಾಗಿದೆ ಎಂಬ ಆರೋಪ ಕೇಳಿಬರುತ್ತಿದ್ದು, ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಯಾವುದೇ ರೀತಿಯ ಹಿಂಸೆ, ಗಲಭೆಗಳು ಇನ್ನಷ್ಟು ದುಃಖ, ನೋವು ಉಂಟುಮಾಡುತ್ತದೆಯಷ್ಟೇ ಹೊರತು ಸಮಸ್ಯೆಗೆ ಪರಿಹಾರ ಸಿಗುವುದಿಲ್ಲ ಎಂದು ಹೇಳಿದರು.