ಗಡಿ ಭಾಗದಲ್ಲಿ ಶಾಂತಿ, ಭದ್ರತೆ ಕಾಪಾಡುವಂತೆ ನೋಡಿಕೊಳ್ಳಲು ಎರಡೂ ದೇಶಗಳು ಎಲ್ಲಾ ಪ್ರಯತ್ನಗಳನ್ನು ಮಾಡಲು ಎರಡೂ ದೇಶಗಳು ಒಪ್ಪಿಕೊಂಡಿವೆ. ಮಯನ್ಮಾರ್ ದೇಶದ ಒಳಗಿನಿಂದ ದಂಗೆಕೋರರು ಭಾರತದೊಳಗೆ ಹೋಗಲು ಯತ್ನಿಸಿದರೆ ಅದನ್ನು ಸರ್ಕಾರ ಸಹಿಸುವುದಿಲ್ಲ, ಒಪ್ಪುವುದು ಕೂಡ ಇಲ್ಲ, ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ಪರಸ್ಪರ ಸಹಕಾರದ ಮೂಲಕ ಬಗೆಹರಿಸಲು ಪ್ರಯತ್ನಿಸಬೇಕು ಎಂದು ಅಂಗ್ ಸಾನ್ ಸೂಕಿ ಹೇಳಿದರು. ಇದಕ್ಕೆ ಪ್ರತಿಕ್ರಿಯಿಸಿದ ಸುಷ್ಮಾ ಸ್ವರಾಜ್, ಮಯನ್ಮಾರ್ ಗೆ ಎಲ್ಲಾ ರೀತಿಯ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ.