ರಾಷ್ಟ್ರಗೀತೆ ಹಾಡುವಾಗ ಸಿಎಂ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಂಡ ಕಾಂಗ್ರೆಸ್ ಕಾರ್ಯಕರ್ತ

ಎಲ್ಲರೂ ಗಂಭೀರತೆಯಿಂದ ರಾಷ್ಟ್ರಗೀತೆ ಹಾಡುವ ವೇಳೆ ಕಾರ್ಯಕರ್ತನೊಬ್ಬ ಮುಖ್ಯಮಂತ್ರಿ ವಿ ನಾರಾಯಣಸ್ವಾಮಿ ಅವರ ಜೊತೆ ಸೆಲ್ಫಿ ತೆಗೆದುಕೊಂಡ ಘಟನೆ ...
ನಾರಾಯಣ ಸ್ವಾಮಿ
ನಾರಾಯಣ ಸ್ವಾಮಿ

ಪುದುಚೆರಿ: ಎಲ್ಲರೂ ಗಂಭೀರತೆಯಿಂದ ರಾಷ್ಟ್ರಗೀತೆ ಹಾಡುವ ವೇಳೆ ಕಾರ್ಯಕರ್ತನೊಬ್ಬ ಮುಖ್ಯಮಂತ್ರಿ  ವಿ ನಾರಾಯಣಸ್ವಾಮಿ ಅವರ ಜೊತೆ ಸೆಲ್ಫಿ ತೆಗೆದುಕೊಂಡ ಘಟನೆ ಪುದುಚೆರಿಯ ತಿರುವಲ್ಲುವರ್ ನಲ್ಲಿ ನಡೆದಿದೆ.

ತಿರುವಲ್ಲುವರ್ ಪ್ರೌಢ ಶಾಲೆಯಲ್ಲಿ  ಏರ್ಪಡಿಸಿದ್ದ ರಾಷ್ಟ್ರಗೀತೆ ದಿನಾಚರಣೆಯಲ್ಲಿ ಈ ಪ್ರಮಾದ ನಡೆದಿದೆ. ಮಾನವ ಸಂಪನ್ಮೂಲ ಇಲಾಖೆ ಆಗಸ್ಟ್ 9ರಿಂದ 23 ರವರೆಗೆ ಆಜಾದಿ-70 ಎಂಬ ಅಭಿಯಾನ ಆಯೋಜಿಸಿದ್ದು, ಸ್ವಾತಂತ್ರ್ಯಕ್ಕಾಗಿ ಮಡಿದವರ ಸ್ಮರಣಾ ಕಾರ್ಯಕ್ರಮ ನಡೆಸುತ್ತಿದೆ. ಈ ಹಿನ್ನೆಲೆಯಲ್ಲಿ  ನಿನ್ನೆ ಶಾಲೆಯಲ್ಲಿ ಬೆಳಗ್ಗೆ 11 ಗಂಟೆಗೆ ರಾಷ್ಟ್ರಗೀತೆ ಹಾಡಲಾಗುತ್ತಿತ್ತು.

ಮುಖ್ಯಮಂತ್ರಿ ವಿ.ನಾರಾಯಣಸ್ವಾಮಿ ಮತ್ತು ಶಾಲಾ ಮಕ್ಕಳು ರಾಷ್ಟ್ರಗೀತೆ ಹಾಡುತ್ತಿದ್ದರು. ಈ ವೇಳೆ ಓರ್ಲ್ನಾನ್ ಪೆಟ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿಎಂ ಜೊತೆ ಸೆಲ್ಫಿ ತೆಗೆದುಕೊಂಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com