ರೋಹಿತ್ ವೇಮುಲ
ರೋಹಿತ್ ವೇಮುಲ

ಆತ್ಮಹತ್ಯೆ ಮಾಡಿಕೊಂಡಿದ್ದ ರೋಹಿತ್ ವೇಮುಲ ದಲಿತನಲ್ಲ: ತನಿಖಾ ಆಯೋಗ

ಹೈದರಾಬಾದ್ ಕೇಂದ್ರ ವಿಶ್ವವಿದ್ಯಾಲಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ಸಂಶೋಧನಾ ವಿದ್ಯಾರ್ಥಿ ರೋಹಿತ್ ವೇಮುಲ ಪರಿಶಿಷ್ಟ ಜಾತಿ(ಎಸ್ಸಿ) ಸಮುದಾಯಕ್ಕೆ...
Published on

ನವದೆಹಲಿ: ಹೈದರಾಬಾದ್ ಕೇಂದ್ರ ವಿಶ್ವವಿದ್ಯಾಲಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ಸಂಶೋಧನಾ ವಿದ್ಯಾರ್ಥಿ ರೋಹಿತ್ ವೇಮುಲ ಪರಿಶಿಷ್ಟ ಜಾತಿ(ಎಸ್ಸಿ) ಸಮುದಾಯಕ್ಕೆ ಸೇರಿದವನಲ್ಲ ಎಂದು ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಇಲಾಖೆ ನೇಮಿಸಿದ್ದ ಏಕ ಸದಸ್ಯತ್ವದ ಆಯೋಗ ವರದಿ ಮಾಡಿದೆ.

ಕಳೆದ ಜನವರಿಯಲ್ಲಿ ವೇಮುಲಾ ವಿಶ್ವವಿದ್ಯಾನಿಲಯದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದರು. ಇದು ದೇಶಾದ್ಯಂತ ಆಕ್ರೋಶಕ್ಕೆ ಗುರಿಯಾಗಿತ್ತು. ಈ ಸಂಬಂಧ ತನಿಖೆಗೆ ಅಲಹಾಬಾದ್ ಹೈಕೋರ್ಟ್ ನ ನಿವೃತ್ತ ನ್ಯಾಯಮೂರ್ತಿ ಎಕೆ ರೂಪನ್ ವಾಲ್ ನೇತೃತ್ವದ ಏಕ ಸದಸ್ಯತ್ವ ಆಯೋಗವನ್ನು ರಚಿಸಲಾಗಿತ್ತು. ಇದೀಗ ಆಯೋಗ ವಿಶ್ವವಿದ್ಯಾಲಯ ಅನುದಾನ ಆಯೋಗಕ್ಕೆ(ಯುಜಿಸಿ) ಆಗಸ್ಟ್ ಮೊದಲ ವಾರದಲ್ಲೇ ತನ್ನ ವರದಿ ಸಲ್ಲಿಸಿದೆ ಎಂದು ಯುಜಿಸಿಯ ಮೂಲಗಳು ತಿಳಿಸಿವೆ.

ಈ ಪ್ರಕರಣಕ್ಕೆ ಸಂಬಂಧ ಈ ಹಿಂದೆ ಕೇಂದ್ರ ಸಚಿವೆ ಸುಷ್ಮಾ ಸ್ವರಾಜ್ ಹಾಗೂ ಥಾವರ್ ಚಂದ್ ಗೊಹ್ಲೋಟ್ ಅವರು ರೋಹಿತ್ ಮೇಮುಲಾ ಇತರ ಹಿಂದುಳಿತ ವರ್ಗಗಳಿಗೆ ಸೇರಿದ ವಡ್ಡೇರಾ ಎಂಬ ಸಮುದಾಯಕ್ಕೆ ಸೇರಿದವರಾಗಿದ್ದು, ಆತನ ಆತ್ಮಹತ್ಯೆಯನ್ನು ದಲಿತರ ಹೆಸರಿಗೆ ಥಳಕು ಹಾಕಿ ಸಮಸ್ಯೆ ಸೃಷ್ಠಿಸಲಾಗಿದೆ ಎಂದು ಪ್ರತಿಪಾದಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X
Google Preferred source

Advertisement

X
Kannada Prabha
www.kannadaprabha.com