ತಂಗ್ಧಾರ್'ನಲ್ಲಿ ಮತ್ತೆ ಕದನ ವಿರಾಮ ಉಲ್ಲಂಘನೆ: ಗಡಿ ನುಸುಳಲು ಯತ್ನಿಸಿದ ಉಗ್ರರ ಗುಂಪು

ಕುಪ್ವಾರ ಜಿಲ್ಲೆಯ ತಂಗ್ಧಾರ್ ಸೆಕ್ಟರ್ ನಲ್ಲಿ ಮತ್ತೆ ಕದನ ವಿರಾಮ ಉಲ್ಲಂಘಟನೆಯಾಗಿದ್ದು, ಉಗ್ರರ ಗುಂಪೊಂದು ಗಡಿ ನುಸುಳಲು ಯತ್ನಿಸಿರುವ ಘಟನೆ ಗುರುವಾರ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಶ್ರೀನಗರ: ಕುಪ್ವಾರ ಜಿಲ್ಲೆಯ ತಂಗ್ಧಾರ್ ಸೆಕ್ಟರ್ ನಲ್ಲಿ ಮತ್ತೆ ಕದನ ವಿರಾಮ ಉಲ್ಲಂಘಟನೆಯಾಗಿದ್ದು, ಉಗ್ರರ ಗುಂಪೊಂದು ಗಡಿ ನುಸುಳಲು ಯತ್ನಿಸಿರುವ ಘಟನೆ ಗುರುವಾರ ನಡೆದಿದೆ.

ಜಮ್ಮು ಮತ್ತು ಕಾಶ್ಮೀರದ ಕುಪ್ವಾರದ ಜಿಲ್ಲೆಯ ತಂಗ್ಧಾರ್ ಸೆಕ್ಟರ್ ನಲ್ಲಿ ಗಡಿ ಭಾಗದ ಬಳಿ ಬಂದಿರುವ ಉಗ್ರರ ಗುಂಪು ಗಡಿ ನುಸುಳಲು ಯತ್ನಿಸಿದೆ. ಈ ವೇಳೆ ಯೋಧರು ಹಾಗೂ ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದೆ. ಘಟನೆ ವೇಳೆ ಯೋಧನೊಬ್ಬ ಗಂಭೀರವಾಗಿ ಗಾಯಗೊಂಡಿರುವುದಾಗಿ ತಿಳಿದುಬಂದಿದೆ.

ಉಗ್ರರು ಗಡಿ ನುಸುಳಿರುವ ಕುರಿತಂತೆ ಹಲವು ಶಂಕೆಗಳು ವ್ಯಕ್ತವಾಗಿದ್ದು, ಭದ್ರತಾ ಸಿಬ್ಬಂದಿಗಳು ಸ್ಥಳದಲ್ಲಿ ಕಾರ್ಯಾಚರಣೆಯನ್ನು ಆರಂಭಿಸಿದ್ದಾರೆ.

ಕೆಲ ದಿನಗಳ ಹಿಂದಷ್ಟೇ ಇದೇ ಪ್ರದೇಶದಲ್ಲಿದ್ದ ಭಾರತೀಯ ಸೇನಾ ಶಿಬಿರದ ಮೇಲೆ ಉಗ್ರರು ದಾಳಿ ನಡೆಸಿದ್ದರು. ಕಾರ್ಯಾಚರಣೆ ನಡೆಸಿದ್ದ ಭಾರತೀಯ ಸೇನೆ ಮೂವರು ಉಗ್ರರನ್ನು ಹೊಡೆದುರುಳಿಸುವಲ್ಲಿ ಯಶಸ್ವಿಯಾಗಿದ್ದರು. ದಾಳಿಯಲ್ಲಿ ಓರ್ವ ಯೋಧ ಹಾಗೂ ಮತ್ತೋರ್ವ ನಾಗರೀಕ ಮೃತಪಟ್ಟಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com