ಕೇಂದ್ರ ಸರ್ಕಾರದ ಹೆಚ್ಚಿನ ಸಚಿವರು ಹಾಜರಿದ್ದ ಉಪನ್ಯಾಸದಲ್ಲಿ ಬದಲಾವಣೆ ಬಾಹ್ಯ ಮತ್ತು ಆಂತರಿಕ ಕಾರಣಗಳಿಗಾಗಿ ಆಗಬೇಕು ಎಂದರು. ಪ್ರತಿ ದೇಶ ತನ್ನದೇ ಆದ ಅನುಭವ, ಸಂಪತ್ತು ಮತ್ತು ಶಕ್ತಿಯನ್ನು ಹೊಂದಿರುತ್ತದೆ. 30 ವರ್ಷಗಳ ಹಿಂದೆ ದೇಶಕ್ಕೆ ಆಂತರಿಕವಾಗಿ ಅವಲೋಕಿಸಿ ಪರಿಹಾರ ಕಂಡುಕೊಳ್ಳುವುದು ಸಾಧ್ಯವಾಗುತ್ತಿತ್ತು. ಇಂದು, ದೇಶಗಳು ಅಂತರ ಅವಲಂಬನೆ ಮತ್ತು ಅಂತರ ಸಂಬಂಧವನ್ನು ಹೊಂದಿವೆ. ಯಾವುದೇ ದೇಶ ಒಂಟಿಯಾಗಿ ಅಭಿವೃದ್ಧಿ ಹೊಂದಲು ಸಾಧ್ಯವಿಲ್ಲ. ಪ್ರತಿಯೊಂದು ದೇಶ ಜಾಗತಿಕ ಮಟ್ಟದಲ್ಲಿ ತನ್ನ ಚಟುವಟಿಕೆಯಲ್ಲಿ ಸಾಧನೆ ಮಾಡಬೇಕು ಇಲ್ಲದಿದ್ದರೆ ಹಿಂದೆ ಬೀಳುತ್ತದೆ ಎಂದು ಪ್ರಧಾನಿ ಹೇಳಿದರು.