300 ಕೋಟಿ ರು.ಕೊಡಲು ಸಿದ್ಧ: ಸುಪ್ರೀಂಗೆ ಸುಬ್ರತಾ ರಾಯ್

ಬ್ಯಾಂಕ್ ಗ್ಯಾರಂಟಿಗಾಗಿ ಸೆಬಿಗೆ ಹೆಚ್ಚುವರಿ 300 ಕೋಟಿ ರುಪಾಯಿ ನೀಡಲು ತಾವು ಸಿದ್ಧವಿರುವುದಾಗಿ ಸಹಾರ ಗ್ರೂಪ್ ಮುಖ್ಯಸ್ಥ ಹಾಗೂ ಬಹುಕೋಟಿ...
ಸುಬ್ರತಾ ರಾಯ್
ಸುಬ್ರತಾ ರಾಯ್
Updated on
ನವದೆಹಲಿ: ಬ್ಯಾಂಕ್ ಗ್ಯಾರಂಟಿಗಾಗಿ ಸೆಬಿಗೆ ಹೆಚ್ಚುವರಿ 300 ಕೋಟಿ ರುಪಾಯಿ ನೀಡಲು ತಾವು ಸಿದ್ಧವಿರುವುದಾಗಿ ಸಹಾರ ಗ್ರೂಪ್ ಮುಖ್ಯಸ್ಥ ಹಾಗೂ ಬಹುಕೋಟಿ ಹಗರಣದ ಆರೋಪಿ ಸುಬ್ರತಾ ರಾಯ್ ಅವರು ಶುಕ್ರವಾರ ಸುಪ್ರೀಂಕೋರ್ಟ್​ಗೆ ತಿಳಿಸಿದ್ದಾರೆ.
ಈ ಹಿಂದೆ ಸುಬ್ರತಾ ರಾಯ್ ಪೆರೋಲ್ ಅವಧಿಯನ್ನು ಮತ್ತೆ ವಿಸ್ತರಿಸಿದ್ದ ಮುಖ್ಯ ನ್ಯಾಯಮೂರ್ತಿ ಟಿ.ಎಸ್.ಠಾಕೂರ್ ನೇತೃತ್ವದ ಸುಪ್ರೀಂ ಪೀಠ ಹೆಚ್ಚುವರಿಯಾಗಿ 300 ಕೋಟಿ ರುಪಾಯಿಯನ್ನು ಆಗಸ್ಟ್ 3ರೊಳಗೆ ಜಮಾ ಮಾಡುವಂತೆ ಸೂಚಿಸಿತ್ತು. ಈ ಸಂಬಂಧ ಇಂದು ನಡೆದ ವಿಚಾರಣೆ ವೇಳೆ ಆರೋಪಿ ಪರ ವಕೀಲ ಕಪಿಲ್ ಸಿಬಲ್ ಅವರು ತಮ್ಮ ಕಕ್ಷಿದಾರ ಹೆಚ್ಚುವರಿಯಾಗಿ 300 ಕೋಟಿ ರುಪಾಯಿ ನೀಡಲು ಸಿದ್ಧರಿದ್ದಾರೆ. ಆದರೆ ಈ ಹಣವನ್ನು ಬ್ಯಾಂಕ್ ಗ್ಯಾರಂಟಿಯಾಗಿ ಪರಿಗಣಿಸಬೇಕು ಎಂದು ಮನವಿ ಮಾಡಿದರು.
ತಾಯಿ ನಿಧನದ ಹಿನ್ನೆಲೆಯಲ್ಲಿ ಕಳೆದ ಮೇ 6ರಂದು ರಾಯ್ ಯನ್ನು ಪೆರೋಲ್ ಮೇಲೆ ಕೋರ್ಟ್ ಬಿಡುಗಡೆ  ಮಾಡಿತ್ತು. ಬಳಿಕ ಅದನ್ನು ಮತ್ತೆ ಎರಡು ತಿಂಗಳ ಕಾಲ ವಿಸ್ತರಿಸಿತ್ತು.
ವಸತಿ ಯೋಜನೆ ಹೆಸರಿನಲ್ಲಿ ಸಾರ್ವಜನಿಕ ಹೂಡಿಕೆದಾರರನ್ನು ವಂಚಿಸಿ, ಹೂಡಿಕೆ ಹಣ ಹಿಂದಿರುಗಿಸದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್  ಜಾಮೀನುರಹಿತ ವಾರಂಟ್ ಹೊರಡಿಸಿ, ಬಂಧನಕ್ಕೆ ಆದೇಶಿಸಿತ್ತು.​ ಇದಾದ ಬಳಿಕ 2 ದಿನಗಳಿಂದ ತಲೆ ಮರೆಸಿಕೊಂಡಿದ್ದ 65 ವರ್ಷದ ಸುಬ್ರತಾ ರಾಯ್ ಬಳಿಕ ಲಕ್ನೋದಲ್ಲಿ ಪೊಲೀಸರ ಎದುರು ಶರಣಾಗಿ ಜೈಲುಪಾಲಾಗಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com