ಕಾಶ್ಮೀರದಲ್ಲಿ ಯುವಕರನ್ನು ಪ್ರಚೋದಿಸುತ್ತಿರುವವರು ಅವರ ಮಕ್ಕಳನ್ನು ಸುರಕ್ಷಿತವಾಗಿರಿಸಿದ್ದಾರೆ: ಸಚಿವ ಜಿತೇಂದ್ರ ಸಿಂಗ್

ದೇಶದ ಅಸ್ಮಿತೆಗೆ ಧಕ್ಕೆ ಉಂಟುಮಾಡುತ್ತಿರುವವರ ಬಗ್ಗೆ ಕಾಶ್ಮೀರದ ಯುವ ಜನತೆಗೆ ಅರಿವು ಮೂಡಿಸುವ ಅಗತ್ಯವಿದೆ ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಹೇಳಿದ್ದಾರೆ.
ಕಾಶ್ಮೀರ ಗಲಭೆ
ಕಾಶ್ಮೀರ ಗಲಭೆ
Updated on

ನವದೆಹಲಿ: ದೇಶದ ಅಸ್ಮಿತೆಗೆ ಧಕ್ಕೆ ಉಂಟುಮಾಡುತ್ತಿರುವವರ ಬಗ್ಗೆ ಕಾಶ್ಮೀರದ ಯುವ ಜನತೆಗೆ ಅರಿವು ಮೂಡಿಸುವ ಅಗತ್ಯವಿದೆ ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಹೇಳಿದ್ದಾರೆ.

ಕಾಶ್ಮೀರದಲ್ಲಿ ಗಲಭೆ, ಜಿಹಾದ್ ಗೆ ಯುವಕರನ್ನು ಪ್ರಚೋದಿಸುತ್ತಿರುವವರು ತಮ್ಮ ಮಕ್ಕಳನ್ನು ಮಾತ್ರ ಸುರಕ್ಷಿತವಾಗಿ ಬೆಳೆಸುತ್ತಿದ್ದಾರೆ. ಆದರೆ ಪ್ರಚೋದನೆಗೊಳಗಾಗಿ ಕಲ್ಲು ತೂರಾಟ ಮಾಡುತ್ತಿರುವ ಬಡತನದ ಹಿನ್ನೆಲೆಯುಳ್ಳವರು ಮಾತ್ರ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ ಎಂದು ಜಿತೇಂದ್ರ ಸಿಂಗ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸ್ವರ್ಗದ ಹೆಸರಿನಲ್ಲಿ ಕಾಶ್ಮೀರ ಯುವಕರನ್ನು ಭಯೋತ್ಪಾದನೆಗೆ ಪ್ರಚೋದಿಸುತ್ತಿರುವವರು ಯಾಕೆ ತಮ್ಮ ಮಕ್ಕಳನ್ನು ಜನ್ನತ್( ಸ್ವರ್ಗ)ಕ್ಕೆ ಕಲಿಸಲು ಇಚ್ಛಿಸುವುದಿಲ್ಲ ಎಂದು ಜಿತೇಂದ್ರ ಸಿಂಗ್ ಪ್ರಶ್ನಿಸಿದ್ದು, ಭಯೋತ್ಪಾದನೆ ವಿಷಯದಲ್ಲಿ  ಕೇಂದ್ರ ಸರ್ಕಾರ ರಾಜಿಮಾಡಿಕೊಳ್ಳುವುದಿಲ್ಲ ಎಂದು ತಿಳಿಸಿದ್ದಾರೆ. ಅಮಾಯಕ ನಾಗರಿಕರ ರಕ್ಷಣೆಯನ್ನು ಗಮನದಲ್ಲಿಟ್ಟುಕೊಂಡು ಭಯೋತ್ಪಾದನೆ ವಿರುದ್ಧದ ಕಾರ್ಯಾಚರಣೆ ನಡೆಸಲಾಗುವುದು ಎಂದು ಜಿತೇಂದ್ರ ಸಿಂಗ್ ಭರವಸೆ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com