ಇಂದು ಜೆಡಿಎ ವಿರುದ್ಧ ಬಲಪ್ರದರ್ಶನಕ್ಕೆ ಮುಂದಾದ ರಾಜಮಾತೆ ನಗರದ ಅರಮನೆಯಿಂದ ತ್ರಿಪೊಲಿಯಾ ಗೇಟ್ ವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು. ಈ ವೇಳೆ ತೆರೆದ ವಾಹನದಿಂದಲೇ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಪದ್ಮಿನಿ ದೇವಿ ಅವರು, ಇಂದು ಇಡೀ ಜೈಪೂರ ನಮ್ಮೊಂದಿಗಿದೆ. ರಾಜ್ ಮಹಲ್ ಅರಮನೆಗೆ ಸಂಬಂಧಿಸಿದಂತೆ ಜೆಡಿಎ ಹಸ್ತಕ್ಷೇಪದಿಂದ ನನಗೆ ತುಂಬಾ ನೋವಾಗಿದೆ ಎಂದರು.