ಅಂತರಿಕ್ಷಯಾನ ಕುರಿತ ಕಾರ್ಯಾಗಾರವೊಂದರಲ್ಲಿ ಮಾತನಾಡಿದ ಅರುಪ್ ರಹಾ ಅವರು, ಉದಾತ್ತ ಚಿಂತನೆಗಳಿಗೆ ಜೋತು ಬಿದ್ದಿರುವ ನಾವು ತಾರ್ಕಿಕ ಮಾರ್ಗ ಅನುಸರಿಸುವುದಿಲ್ಲ. ದೇಶದ ಭದ್ರತೆ ವಿಚಾರದಲ್ಲಿ ಸೇನಾ ಶಕ್ತಿಯ ಬಳಕೆಯನ್ನು ಕಡೆಗಣಿಸಲಾಗಿದೆ. ಪಿಒಕೆ ಸಮಸ್ಯೆ ಪರಿಹರಿಸಿಕೊಳ್ಳಲು ನಾವು ವಿಶ್ವಸಂಸ್ಥೆ ಬಳಿ ಹೋದೆವು. ಆದರೆ ಸಮಸ್ಯೆ ಇನ್ನೂ ಪರಿಹಾರವಾಗಿಲ್ಲ. ಹೀಗಾಗಿ ಪಿಒಕೆ ಈಗಲೂ ನಮಗೆ ಮುಳ್ಳಾಗಿ ಕಾಡುತ್ತಿದೆ ಎಂದು ಹೇಳಿದ್ದಾರೆ.
ನಮ್ಮ ವಿದೇಶಾಂಗ ನೀತಿ ವಿಶ್ವಸಂಸ್ಥೆ, ಅಲಿಪ್ತ ನೀತಿ ಹಾಗೂ ಪಂಚಶೀಲ ಸಿದ್ಧಾಂತದಡಿ ಸ್ಥಾಪಿತವಾಗಿದೆ. ನಾವು ಉನ್ನತ ಆದರ್ಶಗಳನ್ನು ಹೊಂದಿದ್ದು, ಭದ್ರತಾ ಅಗತ್ಯಗಳಿಗಾಗಿ ವ್ಯವಹಾರಿಕ ಮಾರ್ಗವನ್ನು ಅನುಸರಿಸುವುದಿಲ್ಲ ಎಂದು ವಾಯುಪಡೆ ಮುಖ್ಯಸ್ಥರು ಹೇಳಿದ್ದಾರೆ.