ಈ ಸಂದರ್ಭದಲ್ಲಿ ಮಾತನಾಡಿದ ರಾಹುಲ್ ಗಾಂಧಿ, ಕಾಶ್ಮೀರ ಹೊತ್ತಿ ಉರಿಯುತ್ತಿರುವಾಗ ನಮ್ಮನ್ನು ಅಪಹಾಸ್ಯ ಮಾಡುತ್ತಿದ್ದ ವ್ಯಕ್ತಿ ಇಂದು ಮೌನವಾಗಿ ಕುಳಿತಿದ್ದಾರೆ. ಕೇಂದ್ರ ಸರ್ಕಾರದ ಸರ್ಜಿಕಲ್ ಸ್ಟ್ರೈಕ್ ನಂತರ ಜಮ್ಮು-ಕಾಶ್ಮೀರ ಮತ್ತು ಗಡಿ ಪ್ರದೇಶದಲ್ಲಿ 21 ಪ್ರಮುಖ ದಾಳಿಗಳು ಮತ್ತು ನೂರಾರು ಸಲ ಕದನ ವಿರಾಮ ಉಲ್ಲಂಘನೆಯಾಗಿದೆ, ತಮ್ಮ ವೈಯಕ್ತಿಕ ವ್ಯಕ್ತಿತ್ವವನ್ನು ಕಾಪಾಡಿಕೊಳ್ಳಲು, ತಮ್ಮನ್ನು ರಕ್ಷಿಸಿಕೊಳ್ಳಲು ದೇಶದ ಜನತೆಗೆ ನೋವು ನೀಡುವ ಪ್ರಧಾನಿಯನ್ನು ಭಾರತ ಇದುವರೆಗೆ ಕಂಡಿಲ್ಲ. ಕಾಂಗ್ರೆಸ್ ಯಾವತ್ತಿಗೂ ತಮ್ಮ ಕಲ್ಪನೆಯ ಪ್ರಧಾನಿಯನ್ನು ದೇಶಕ್ಕೆ ಕೊಟ್ಟಿಲ್ಲ, ಆದರೆ ಮೋದಿಯವರು ತಮ್ಮದೇ ಕಲ್ಪನೆಯಲ್ಲಿ ಬಂಧಿಯಾಗಿದ್ದಾರೆ ಎಂದು ಆರೋಪಿಸಿದರು.