ನೋಟು ನಿಷೇಧದ ಸಮಸ್ಯೆ ದೀರ್ಘಾವಧಿ ಪ್ರಯೋಜನಗಳಿಗೆ ಹೋಲಿಸಿದರೆ ಅತ್ಯಲ್ಪ: ಗ್ರೇಟ್ ಖಲಿ

ಪ್ರಸಿದ್ಧ ಕುಸ್ತಿಪಟು ಖಲಿ ನೋಟು ನಿಷೇಧದ ಕ್ರಮವನ್ನು ಸ್ವಾಗತಿಸಿದ್ದು ದೀರ್ಘಾವಧಿ ಪ್ರಯೋಜನಗಳಿಗೆ ಹೋಲಿಸಿದರೆ ನೋಟು ನಿಷೇಧದಿಂದ ಉಂಟಾಗುತ್ತಿರುವ ಸಮಸ್ಯೆಗಳು ಅತ್ಯಲ್ಪ ಎಂದು ಅಭಿಪ್ರಾಯಪಟ್ಟಿದ್ದಾರೆ.
ಪ್ರಧಾನಿ ಮೋದಿಯನ್ನು ಭೇಟಿ ಮಾಡಿದ ಕುಸ್ತಿ ಪಟು ದಲೀಪ್ ಸಿಂಗ್ ರಾಣಾ (ಗ್ರೇಟ್ ಖಲಿ)
ಪ್ರಧಾನಿ ಮೋದಿಯನ್ನು ಭೇಟಿ ಮಾಡಿದ ಕುಸ್ತಿ ಪಟು ದಲೀಪ್ ಸಿಂಗ್ ರಾಣಾ (ಗ್ರೇಟ್ ಖಲಿ)
Updated on
ನವದೆಹಲಿ: ಪ್ರಸಿದ್ಧ ಕುಸ್ತಿಪಟು ಖಲಿ ನೋಟು ನಿಷೇಧದ ಕ್ರಮವನ್ನು ಸ್ವಾಗತಿಸಿದ್ದು ದೀರ್ಘಾವಧಿ ಪ್ರಯೋಜನಗಳಿಗೆ ಹೋಲಿಸಿದರೆ ನೋಟು ನಿಷೇಧದಿಂದ ಉಂಟಾಗುತ್ತಿರುವ ಸಮಸ್ಯೆಗಳು ಅತ್ಯಲ್ಪ ಎಂದು ಅಭಿಪ್ರಾಯಪಟ್ಟಿದ್ದಾರೆ. 
ಡಿ.2 ರಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿರುವ ದಲೀಪ್ ಸಿಂಗ್ ರಾಣಾ (ಗ್ರೇಟ್ ಖಲಿ), ನೋಟು ನಿಷೇಧ ಕ್ರಮವನ್ನು ಸ್ವಾಗತಿಸಿದ್ದು, ದೀರ್ಘಾವಧಿಯಲ್ಲಿ ಜನರಿಗೆ ಪ್ರಯೋಜನವಾಗಲಿದೆ ಎಂದಿದ್ದಾರೆ. ಕೇಂದ್ರ ಸರ್ಕಾರದ ಕ್ರಮ ಸದ್ಯಕ್ಕೆ ಸಮಸ್ಯೆಯಾಗಿರಬಹುದು, ಆದರೆ ದೀರ್ಘಾವಧಿಯಲ್ಲಿ ಇದರಿಂದ ಜನರಿಗೆ ಲಾಭವಾಗಲಿದೆ ಎಂದಿದ್ದಾರೆ.  
ಪ್ರಧಾನಿ ನರೇಂದ್ರ ಮೋದಿ ದೇಶದ ಹಿತಾಸಕ್ತಿಯಿಂದ ಈ ನಿರ್ಧಾರ ಕೈಗೊಂಡಿದ್ದಾರೆ. ಅವನ್ನು ಅಭಿನಂದಿಸಲು ಬಯಸುತ್ತೇನೆ, ಆರಂಭದಲ್ಲಿ ಕಠಿಣವಾದರೂ ನಂತರದ ದಿನಗಳಲ್ಲಿ ಕೇಂದ್ರ ಸರ್ಕಾರದ ನಿರ್ಧಾರದಿಂದ ಜನತೆಗೆ ಒಳಿತಾಗಲಿದೆ ಎಂದು ಪ್ರಧಾನಿಗೆ ತಿಳಿಸಿರುವುದಾಗಿ ಗ್ರೇಟ್ ಖಲಿ ಹೇಳಿದ್ದಾರೆ.  

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com