ಭಯೋತ್ಪಾದನೆ ವಿಚಾರವಾಗಿ ಒಂದು ರಾಷ್ಟ್ರವನ್ನು ದೂಷಿಸುವುದು ಸುಲಭ, ಆದರೆ ನಾವು ವಸ್ತುನಿಷ್ಠ ಮತ್ತು ಸಮಗ್ರವಾದ ದೃಷ್ಟಿಕೋನ ಹೊಂದಬೇಕಿದೆ ಎಂದು ಸರ್ತಾಜ್ ಅಜೀಜ್ ಅಭಿಪ್ರಾಯಪಟ್ಟಿದ್ದಾರೆ. ಹಾರ್ಟ್ ಆಫ್ ಏಷ್ಯಾ ಸಮ್ಮೇಳನದಲ್ಲಿ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಫ್ಘಾನಿಸ್ತಾನದ ಅಧ್ಯಕ್ಷ ಅಶ್ರಫ್ ಘನಿ ಪಾಕಿಸ್ತಾನದ ಹೆಸರನ್ನು ನೇರವಾಗಿ ಪ್ರಸ್ತಾಪಿಸದೇ ಭಯೋತ್ಪಾದನೆಯನ್ನು ಪ್ರೋತ್ಸಾಹಿಸುತ್ತಿರುವುದಕ್ಕೆ ಪಾಕಿಸ್ತಾನವನ್ನು ತರಾಟೆಗೆ ತೆಗೆದುಕೊಂಡಿದ್ದರು.