ಪಂಜಾಬ್ ನ ಅಮೃತ್ ಸರದಲ್ಲಿ ಹಾರ್ಟ್ ಆಫ್ ಏಷ್ಯಾ ಸಮ್ಮೇಳನ ನಡೆಯುತ್ತಿದ್ದು, ಸಮ್ಮೇಳನದಲ್ಲಿ ಭಾಗವಹಿಸಲು ಆಗಮಿಸಿದ್ದ ಅಫ್ಘಾನಿಸ್ತಾನದ ಅಧ್ಯಕ್ಷ ಅಶ್ರಫ್ ಘನಿ ಅವರೊಂದಿಗೆ ಸ್ವರ್ಣ ಮಂದಿರ(ಗೋಲ್ಡನ್ ಟೆಂಪಲ್) ಗೆ ಭೇಟಿ ನೀಡಿದ್ದ ಪ್ರಧಾನಿ ಮೋದಿ ಭಕ್ತಾದಿಗಳಿಗೆ ಪ್ರಸಾದವನ್ನು ಸ್ವತಃ ಬಡಿಸಿ ಅಚ್ಚರಿ ಮೂಡಿಸಿದರು. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗೋಲ್ಡನ್ ಟೆಂಪಲ್ ನ ಮುಖ್ಯ ಮುಖ್ಯ ಮಾಹಿತಿ ಅಧಿಕಾರಿ ಗುರುಬಚನ್ ಸಿಂಗ್, ಸ್ವರ್ಣ ಮಂದಿರದಲ್ಲಿ ಭಕ್ತಾದಿಗಳಿಗೆ ಪ್ರಸಾದ ಬಡಿಸಿದ ಮೊದಲ ಪ್ರಧಾನಿ ಮೋದಿಯಾಗಿದ್ದಾರೆ ಎಂದು ಸಂಸತಸ ವ್ಯಕ್ತಪಡಿಸಿದ್ದಾರೆ.