ಭಯೋತ್ಪಾದನೆ ವಿರುದ್ಧ ಭಾರತ ಮತ್ತು ಆಫ್ಘಾನಿಸ್ತಾನದ ನಿಲುವು ಒಂದೇ ಆಗಿದೆ. ಭಯೋತ್ಪಾದಕರ ಕೃತ್ಯಕ್ಕೆ ಆಫ್ಘಾನಿಸ್ತಾನ ಈಗಾಗಲೇ ಸಾಕಷ್ಟು ನಲುಗಿ ಹೋಗಿದ್ದು, ಭಯೋತ್ಪಾದನೆ ವಿರುದ್ಧ ಹೋರಾಡಬೇಕು. ಪೋಷಿಸುವವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಆಗ ಮಾತ್ರವೇ ಭಯೋತ್ಪಾದನೆ ಬುಡಸಮೇತ ಕಿತ್ತೊಗೆಯಲು ಸಾಧ್ಯ
ಎಂದು ಹೇಳಿದರು.
ಅಮೃತಸರ ಶಾಂತಿ, ಸೌಹಾರ್ದತೆಯ ಪ್ರತೀಕವಾಗಿದ್ದು ಇಲ್ಲಿ ಸಮ್ಮೇಳನ ನಡೆಯುತ್ತಿರುವುದು ಭಾರತ ಶಾಂತಿ, ಸಹಕಾರ, ಸೌಹಾರ್ದತೆಯನ್ನು ಬಯಸುತ್ತದೆ ಎಂಬುದನ್ನು ಸಾರುತ್ತದೆ ಎಂದರು.
ಸಮ್ಮೇಳದನದಲ್ಲಿ 40 ದೇಶಗಳ ಪ್ರತಿನಿಧಿಗಳು, 16 ರಾಷ್ಟ್ರಗಳ ಹಿರಿಯ ಅಧಿಕಾರಿಗಳು ಮತ್ತು ಯುರೋಪಿಯನ್ ಯೂನಿಯನ್ ಅಧಿಕಾರಿಗಳು ಭಾಗಿಯಾಗಿದ್ದಾರೆ.