ತಮಿಳುನಾಡು ಸಿಎಂ ಜಯಲಲಿತಾಗೆ ಹೃದಯ ಸ್ತಂಭನ; ಎಂಐಸಿಯುನಲ್ಲಿ ಚಿಕಿತ್ಸೆ

ಕಳೆದ ಹಲವು ದಿನಗಳಿಂದ ಅನಾರೋಗ್ಯಕ್ಕೀಡಾಗಿದ್ದ ತಮಿಳುನಾಡು ಸಿಎಂ ಜಯಲಲಿತಾ ಅವರಿಗೆ ಡಿ.4 ರಂದು ಸಂಜೆ ವೇಳೆಗೆ ಹೃದಯ ಸ್ತಂಭನ ಉಂಟಾಗಿದೆ.
ಜಯಲಲಿತಾ
ಜಯಲಲಿತಾ
ಚೆನ್ನೈ: ಕಳೆದ ಹಲವು ದಿನಗಳಿಂದ ಅನಾರೋಗ್ಯಕ್ಕೀಡಾಗಿದ್ದ ತಮಿಳುನಾಡು ಸಿಎಂ ಜಯಲಲಿತಾ ಅವರಿಗೆ ಡಿ.4 ರಂದು ಸಂಜೆ ವೇಳೆಗೆ ಹೃದಯ ಸ್ತಂಭನ ಉಂಟಾಗಿದೆ.
ಒಂದೆರಡು ತಿಂಗಳಿಂದ ಜಯಲಲಿತಾ ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇತ್ತೀಚೆಗಷ್ಟೇ ಚೇತರಿಸಿಕೊಳ್ಳುತ್ತಿದ್ದ ಜಯಲಲಿತಾ ಅವರಿಗೆ ಹೃದಯ ಸ್ತಂಭನ ಉಂಟಾಗಿದೆ ಎಂದು ಅಪೋಲೋ ಆಸ್ಪತ್ರೆಯ ಪ್ರಕಟಣೆ ಮೂಲಕ ತಿಳಿದುಬಂದಿದೆ.   
ಆಸ್ಪತ್ರೆ ಸಿಒಒ ವಿಶ್ವನಾಥನ್ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದ್ದು, ತಮಿಳುನಾಡು ಸಿಎಂ ಅವರ ಆರೋಗ್ಯದ ಬಗ್ಗೆ ತಜ್ಞರು ನಿಗಾವಹಿಸಿದ್ದಾರೆ ಎಂದು ಹೇಳಿದ್ದಾರೆ. ಜಯಲಲಿತಾ ಅವರ ಅನಾರೋಗ್ಯದ ಬಗ್ಗೆ ಎಐಎಡಿಎಂಕೆ ಸಹ ಹೇಳಿಕೆ ಬಿಡುಗಡೆ ಮಾಡಿದ್ದು ಮೆಡಿಕಲ್ ತೀವ್ರ ನಿಗಾ ಘಟಕದಲ್ಲಿ (ಎಂಐಸಿಯು)ನಲ್ಲಿ  ಜಯಲಲಿತಾ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಯಾವುದೇ ವದಂತಿಗಳಿಗೆ ಕಿವಿಗೊಡಬೇಡಿ ಎಂದು ಮನವಿ ಮಾಡಲಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com