ಜಯಲಲಿತಾರ ಅಂತಿಮ ದರ್ಶನಕ್ಕೆ ಆಗಮಿಸುತ್ತಿದ್ದ ರಾಷ್ಟ್ರಪತಿಗಳಿದ್ದ ವಿಮಾನ ದೆಹಲಿಗೆ ವಾಪಸ್

ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾರ ಅಂತಿಮ ದರ್ಶನ ಪಡೆಯಲು ಆಗಮಿಸುತ್ತಿದ್ದ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿದ್ದ ವಿಮಾನದಲ್ಲಿ ತಾಂತ್ರಿಕ ದೋಷ...
ಪ್ರಣಬ್ ಮುಖರ್ಜಿ
ಪ್ರಣಬ್ ಮುಖರ್ಜಿ
Updated on

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾರ ಅಂತಿಮ ದರ್ಶನ ಪಡೆಯಲು ಆಗಮಿಸುತ್ತಿದ್ದ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿದ್ದ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ.

ಐಎಎಫ್ ವಿಮಾನದಲ್ಲಿ ರಾಷ್ಟ್ರಪತಿಗಳು ಪ್ರಣಬ್ ಮುಖರ್ಜಿ ಅವರು ನವದೆಹಲಿಯಿಂದ ಚೆನ್ನೈಗೆ ಹೊರಟಿದ್ದರು. ಈ ವೇಳೆ ವಿಮಾನದಲ್ಲಿ ಏಕಾಏಕಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು ಕೂಡಲೇ ವಿಮಾನ ದೆಹಲಿಗೆ ವಾಪಸ್ ಆಗಿದೆ.

ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಜಯಲಲಿತಾ ಅವರು ನಿನ್ನೆ ರಾತ್ರಿ 11.15ರ ಸುಮಾರಿಗೆ ಇಹಲೋಕ ತ್ಯಜಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com