500, 1000 ರೂ ಮುಖಬೆಲೆಯ ನೋಟು ನಿಷೇಧವಾಗುವವರೆಗೂ ನಾನು ನಗದನ್ನೇ ಸ್ವೀಕರಿಸುತ್ತಿದ್ದೆ. ಆದರೆ ಇನ್ನು ಮುಂದಿನ ದಿನಗಳಲ್ಲಿ ನನ್ನ ಅಂಗಡಿಯಲ್ಲಿ ನಗದು ರಹಿತ ವ್ಯವಸ್ಥೆ ಜಾರಿಗೆ ಬರಲಿದೆ, ಇದೇ ಉತ್ತಮ ವ್ಯವಸ್ಥೆ ಎನ್ನುತ್ತಾರೆ ಕಿರಣ್. ಬ್ಯಾಂಕ್ ಆಫ್ ಬರೋಡಾ ಬ್ಯಾಂಕ್ ನಲ್ಲಿ ಖಾತೆಯನ್ನು ಹೊಂದಿರುವ ಚಾಯ್ ವಾಲನಿಗೆ ಜಿಪಿಆರ್ ಎಸ್ ಸ್ವೈಪ್ ಮಷಿನ್ ದೊರೆಯಲಿದ್ದು, ಈಗಾಗಲೇ ಪೇಟಿಎಂ ಮೂಲಕವೂ ಗ್ರಾಹಕರಿಂದ ಹಣ ಪಡೆಯುತ್ತಿದ್ದಾರೆ.