ಸಭೆಯ ನಂತರ ಸುದ್ದಿಗಾರರಿಗೆ ಮಾಹಿತಿ ನೀಡಿದ ಸಂಸದೀಯ ವ್ಯವಹಾರಗಳ ಸಚಿವ ಅನಂತ್ ಕುಮಾರ್, ನೋಟುಗಳ ನಿಷೇಧ ಕುರಿತು ಸರ್ಕಾರಕ್ಕೆ ಜನರ ಬೆಂಬಲ ಸಿಕ್ಕಿದೆ. ಕೆಲ ವಿರೋಧ ಪಕ್ಷಗಳು ಮಾಡುತ್ತಿರುವ ಪ್ರತಿಭಟನೆ, ವಿರೋಧ ಪ್ರಜಾಪ್ರಭುತ್ವಕ್ಕೆ ವಿರುದ್ಧವಾಗಿದೆ. ಪ್ರಧಾನಿಯವರು ಎರಡೂ ಸದನಗಳಲ್ಲಿ ಮಾತನಾಡಲು ಬಯಸಿದ್ದಾರೆ. ಆದರೆ ವಿರೋಧ ಪಕ್ಷದವರೇ ತಮ್ಮ ಗುರಿಯನ್ನು ಬದಲಾಯಿಸುತ್ತಿರುತ್ತಾರೆ. ಈ ವಿಷಯವನ್ನು ಸಂಸತ್ತಿನಲ್ಲಿ ಚರ್ಚಿಸಬೇಕು ಎಂದರು.