ಕೇಂದ್ರ ಸರ್ಕಾರಕ್ಕೆ ಕೆಲವು ಸೂಚನೆಗಳನ್ನು ನೀಡಿರುವ ಚುನಾವಣಾ ಆಯೋಗ, ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳು ಹಾಗೂ ಅವರ ಏಜೆಂಟ್ ಗಳು ಮತದಾರರಿಗೆ ಹಣ ಹಂಚುವುದನ್ನು ಸಿಆರ್ ಪಿಸಿ ಅಡಿಯಲ್ಲಿ ಗ್ರಾಹ್ಯ ಅಪರಾಧಗಳ ಪಟ್ಟಿಗೆ ಸೇರಿಸಬೇಕು ಎಂದು ಸೂಚನೆ ನೀಡಿದ್ದು, ಇದರಿಂದಾಗಿ ಅಪರಾಧಿಗಳನ್ನು ಜಾಮೀನು ರಹಿತವಾಗಿ ಬಂಧಿಸಬಹುದಾಗಿದೆ ಎಂದು ಹೇಳಿದ್ದಾರೆ.