ಭದ್ರತೆ ವಿಡಿಯೋ ಪ್ರಕರಣ; ಭಗವಂತ್ ಮನ್ ಅಮಾನತುಗೊಳಿಸಲು ಸಂಸತ್ ಸಮಿತಿ ಶಿಫಾರಸು

ಸಂಸತ್ತಿನ ಭದ್ರತಾ ವ್ಯವಸ್ಥೆಯನ್ನು ತಮ್ಮ ಮೊಬೈಲ್ ನಲ್ಲಿ ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷದ ಸಂಸದ ಭಗವಂತ್ ಮನ್ ಅವರನ್ನು ಅಮಾನತಿನಲ್ಲಿಡಲು ಸಂಸತ್ ಸಮಿತಿ ಗುರುವಾರ...
ಆಮ್ ಆದ್ಮಿ ಪಕ್ಷದ ಸಂಸದ ಭಗವಂತ್ ಮನ್
ಆಮ್ ಆದ್ಮಿ ಪಕ್ಷದ ಸಂಸದ ಭಗವಂತ್ ಮನ್

ನವದೆಹಲಿ: ಸಂಸತ್ತಿನ ಭದ್ರತಾ ವ್ಯವಸ್ಥೆಯನ್ನು ತಮ್ಮ ಮೊಬೈಲ್ ನಲ್ಲಿ ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷದ ಸಂಸದ ಭಗವಂತ್ ಮನ್ ಅವರನ್ನು ಅಮಾನತಿನಲ್ಲಿಡಲು ಸಂಸತ್ ಸಮಿತಿ ಗುರುವಾರ ಶಿಫಾರಸು ಮಾಡಿದೆ ಎಂದು ಮೂಲಗಳಿಂದ ತಿಳಿಬಂದಿದೆ.

ವಿಡಿಯೋ ಕುರಿತಂತೆ ತನಿಖೆ ನಡೆಸಿರುವ ಸಂಸತ್ ಸಮಿತಿ ಮನ್ ಭಗವಂತ್ ಮನ್ ಅವರನ್ನು ಅಮಾನತಿನಲ್ಲಿಡುವಂತೆ ಶಿಫಾರಸು ಮಾಡಿದ್ದು, ಚಳಿಗಾಲದ ಅಧಿವೇಶನದಲ್ಲಿ ಭಾಗಿಯಾಗದಂತೆ ಅಮಾನತುಗೊಳಿಸುವಂತೆ ತಿಳಿಸಿದೆ ಎಂದು ಹೇಳಲಾಗುತ್ತಿದೆ.

ಆಪ್ ಸಂಸದ ಭಗವಂತ್ ಮನ್ ಅವರು ಸಂಸತ್ತಿನ ಭದ್ರತಾತ ವ್ಯವಸ್ಥೆಯನ್ನು ತಮ್ಮ ಮೊಬೈಲ್ ನಲ್ಲಿ ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹಾಕಿದ್ದರು. ಈ ಪ್ರಕರಣ ಸಂಸತ್ತಿನಲ್ಲಿ ಸಾಕಷ್ಟು ಕೋಲಾಹಲವನ್ನು ಎಬ್ಬಿಸಿತ್ತು. ಸಾಕಷ್ಟು ವಿರೋಧ ವ್ಯಕ್ತವಾದ ಬಳಿಕ ಭಗವಂತ್ ಮನ್ ಅವರು, ಸಂಸತ್ತಿನಲ್ಲಿ ಬೇಷರತ್ ಕ್ಷಮೆಯಾಚಿಸಿದ್ದರು. ಆದರೆ ಈ ಕ್ಷಮೆಯನ್ನು ಒಪ್ಪದ ಸರ್ವ ಸದಸ್ಯರು ಮನ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದರು.

ಸಂಸತ್ ಭದ್ರತಾ ನಿಯಮಗಳನ್ನು ಉಲ್ಲಂಘಿಸಿ ನಡೆಸಿರುವ ಚಿತ್ರೀಕರಣದ ಕುರಿತಂತೆ ಲೋಕಸಭಾ ಸ್ಪೀಕರ್ ಸುಮಿತ್ರಾ ಮಹಾಜನ್ ಅವರು, ಕಿರೀಟ್ ಸೋಮಯ್ಯ ನೇತೃತ್ವದ ಸಮಿತಿ ರಚಿಸಿ ತನಿಖೆ ನಡೆಸಲು ಸೂಚಿಸಿದ್ದರು.

ಇದರಂತೆ ತನಿಖೆ ನಡೆಸಿರುವ ಕಿರೀಟ್ ಸೋಮಯ್ಯ ನೇತೃತ್ವದ ಸಮಿತಿ, ಭಗವಂತ್ ಮನ್ ಅವರನ್ನು ಅಮಾನತಿನಲ್ಲಿಡುವಂತೆ ಶಿಫಾರಸ್ಸು ಮಾಡಿದೆ. ಸಮಿತಿಯ ಶಿಫಾರಸ್ಸಿನಂತೆ ನಾಳೆ ನಡೆಯಲಿರುವ ಕಲಾಪದಲ್ಲಿ ಸಂಸತ್ ನಿರ್ಣಯ ಕೈಗೊಳ್ಳಲಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com