ಯೋಜನೆಯ ಜಾರಿಯಲ್ಲಿ ಸ್ವಲ್ಪ ಲೋಪಗಳು ನಡೆದಿದ್ದರೂ ಅನಾಹುತ ನಡೆಯುವುದು ಸ್ಪಷ್ಟವಾಗಿತ್ತು. ಈ ಹಿನ್ನೆಲೆಯಲ್ಲಿ ಅತ್ಯಂತ ಅಪಾಯಕಾರಿಯಾಗಬಹುದಾದ ನಿರ್ಧಾರವನ್ನು ತೆಗೆದುಕೊಂಡಿದ್ದ ಮೋದಿ, ಹಸ್ ಮುಖ್ ಅಧಿಯಾ ನೇತೃತ್ವದ ತಂಡದ ಮೇಲೆ ನಂಬಿಕೆ ಇಟ್ಟು ತಮ್ಮ ಜನಪ್ರಿಯತೆ ಹಾಗೂ ಗೌರವಗಳನ್ನು ಪಣಕ್ಕಿಟ್ಟು ನೋಟು ನಿಷೇಧದ ನಿರ್ಧಾರವನ್ನು ಅಂತಿಮಗೊಳಿಸುತ್ತಾರೆ. ಇದೇ ನಿರ್ಧಾರವನ್ನು ಕೇಂದ್ರ ಸಚಿವ ಸಂಪುಟದಲ್ಲೂ ಪ್ರಕಟಿಸಿದ್ದ ಪ್ರಧಾನಿ ಮೋದಿ, ನಾನು ಸಾಕಷ್ಟು ಸಂಶೋಧನೆ ನಡೆಸಿದ್ದೇನೆ, ಒಂದು ವೇಳೆ ಅದು ವಿಫಲಗೊಂಡರೆ ದೂಷಣೆಗೆ ಹೊಣೆಗಾರನಾಗುತ್ತೇನೆ ಎಂದು ಹೇಳಿದ್ದರಂತೆ.