ಭಾರತ-ಪಾಕಿಸ್ತಾನದ ನಡುವಿನ ದ್ವಿಪಕ್ಷೀಯ ಸಂಬಂಧ ಹದಗೆಟ್ಟಿರುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅಬ್ದುಲ್ ಬಸಿತ್, ಉಭಯ ರಾಷ್ಟ್ರಗಳ ನಡುವೆ ಗಂಭೀರ ಸಮಸ್ಯೆಗಳಿವೆ, ಅದನ್ನು ಅಲ್ಲಗಳೆಯಲು ಅಥವಾ ದೂರವಿಡಲು ಸಾಧ್ಯವಿಲ್ಲ. ಆದರೆ ದ್ವಿಪಕ್ಷೀಯ ಸಂಬಂಧದ ಹೊಸ ಅಧ್ಯಾಯಕ್ಕೆ ಉಭಯ ರಾಷ್ಟ್ರಗಳೂ ಮುಂದಾಗಬೇಕಿದೆ. ಪಾಕಿಸ್ತಾನ ಭಾರತದೊಂದಿಗೆ ಹಗೆತನವನ್ನು ಬಯಸುವುದಿಲ್ಲ ಎಂದು ತಿಳಿಸಿದ್ದಾರೆ.