ಪ್ರತಿಪಕ್ಷಗಳು ನೋಟು ನಿಷೇಧದ ವಿರುದ್ಧ ಪ್ರತಿಭಟನೆಯನ್ನು ಮುಂದುವರೆಸಿದ್ದು, ಡಿ.8 ನ್ನು ಕರಾಳ ದಿನವನ್ನಾಗಿ ಆಚರಿಸಿದ ಪ್ರತಿಪಕ್ಷಗಳಿಗೆ ತಿರುಗೇಟು ನೀಡಿರುವ ಪ್ರಧಾನಿ ನರೇಂದ್ರ ಮೋದಿ, ನೋಟು ನಿಷೇಧದ ವಿಚಾರದಲ್ಲಿ ಸರ್ಕಾರಕ್ಕೆ ದೇಶದ ಜನತೆಯ ಬೆಂಬಲವಿದೆ ಎಂದು ಹೇಳಿದ್ದರು. ನಂತರ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ನೋಟು ನಿಷೇಧದ ಕಾರ್ಯಾಚರಣೆಯನ್ನು ಭಯೋತ್ಪಾದನೆಯ ವಿರುದ್ಧದ ಯಜ್ಞ ಎಂದು ಹೇಳಿದ್ದು, ದೇಶದ ಜನತೆ ಯಜ್ಞದಲ್ಲಿ ಭಾಗವಹಿಸಿದ್ದಾರೆ. ಅವರಿಗೆ ವಂದಿಸುತ್ತೇನೆ, ಇನ್ನು ಮುಂದೆ ಕಪ್ಪುಹಣದ ಕಾರಣದಿಂದಾಗಿ ಗ್ರಾಮೀಣ ಪ್ರದೇಶಗಳ ಅಭಿವೃದ್ಧಿ ಕುಂಠಿತವಾಗುವುದಿಲ್ಲ ಎಂದು ಭರವಸೆ ನೀಡಿದ್ದಾರೆ.