ಜಯಲಲಿತಾ ನಿಧನದಿಂದ ಆಘಾತ: 280ಕ್ಕೆ ಏರಿದ ಅಭಿಮಾನಿಗಳ ಸಾವಿನ ಸಂಖ್ಯೆ

ತಮಿಳುನಾಡು ಮಾಜಿ ಮುಖ್ಯಮಂತ್ರಿ ಜೆ.ಜಯಲಲಿತಾ ಅವರ ಅಗಲಿಕೆಯಿಂದ ಆಘಾತಕ್ಕೊಳಗಾಗಿರುವ ತಮಿಳುನಾಡಿನಲ್ಲಿ ಈವರೆಗೂ 280 ಮಂದಿ ಅಭಿಮಾನಿಗಳು ಸಾವನ್ನಪ್ಪಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ...
ಜಯಲಲಿತಾ ನಿಧನದಿಂದ ಆಘಾತ: 280ಕ್ಕೆ ಏರಿದ ಅಭಿಮಾನಿಗಳ ಸಾವಿನ ಸಂಖ್ಯೆ
ಜಯಲಲಿತಾ ನಿಧನದಿಂದ ಆಘಾತ: 280ಕ್ಕೆ ಏರಿದ ಅಭಿಮಾನಿಗಳ ಸಾವಿನ ಸಂಖ್ಯೆ
Updated on

ಚೆನ್ನೈ: ತಮಿಳುನಾಡು ಮಾಜಿ ಮುಖ್ಯಮಂತ್ರಿ ಜೆ.ಜಯಲಲಿತಾ ಅವರ ಅಗಲಿಕೆಯಿಂದ ಆಘಾತಕ್ಕೊಳಗಾಗಿರುವ ತಮಿಳುನಾಡಿನಲ್ಲಿ ಈವರೆಗೂ 280 ಮಂದಿ ಅಭಿಮಾನಿಗಳು ಸಾವನ್ನಪ್ಪಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ.

ಅಭಿಮಾನಿಗಳ ಸಾವು ಕುರಿತಂತೆ ಎಐಎಡಿಎಂಕೆ ಪಕ್ಷ ಘೋಷಣೆ ಮಾಡಿದ್ದು, ಅಮ್ಮನ ಸಾವಿನ ಸುದ್ದಿ ಕೇಳುತ್ತಿದ್ದಂತೆ ಹೃದಯಘಾತಕ್ಕೊಳಗಾಗಿ 280 ಮಂದಿ ಸಾವನ್ನಪ್ಪಿದ್ದಾರೆಂದು ಹೇಳಿಕೊಂಡಿದೆ. ಅಲ್ಲದೆ, ಮೃತಪಟ್ಟ ಜನರ ಕುಟುಂಬಗಳಿಗೆ ತಲಾ ರು.3 ಲಕ್ಷ ಹಣವನ್ನು ಪರಿಹಾರವಾಗಿ ನೀಡುವುದಾಗಿ ತಿಳಿಸಿದೆ.

ಎಐಎಡಿಎಂಕೆ ಪಕ್ಷದ ಕಲ್ಯಾಣ ನಿಧಿಯಿಂದ ಪರಿಹಾರ ನೀಡಲಾಗುತ್ತಿದ್ದು, ಪ್ರಸ್ತುತ 203 ಕುಟುಂಬಗಳಿಗೆ ರು.3 ಲಕ್ಷ ಪರಿಹಾರವನ್ನು ನೀಡಿ, ಉಳಿದವರಿಗೆ ಮುಂದಿನ ದಿನಗಳಲ್ಲಿ ಪರಿಹಾರ ಧನವನ್ನು ಮಾಡಲಾಗುತ್ತದೆ ಎಂದು ಘೋಷಣೆ ಮಾಡಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com