'ಅಮ್ಮ'ನ ಅಗಲಿಕೆ ಅರಗಿಸಿಕೊಳ್ಳದ ತಮಿಳುನಾಡು ಜನತೆ: 470ಕ್ಕೆ ಏರಿದ ಅಭಿಮಾನಿಗಳ ಸಾವಿನ ಸಂಖ್ಯೆ

ತಮಿಳುನಾಡು ಮಾಜಿ ಮುಖ್ಯಮಂತ್ರಿ ಜೆ.ಜಯಲಲಿತಾ ಅವರ ಅಕಾಲಿಕ ಸಾವಿನಿಂದ ಆಘಾತಕ್ಕೊಳಗಾಗಿರುವ ತಮಿಳುನಾಡಿನ ಜನತೆ ಈ ವರೆಗೂ ತನ್ನ ದುಃಖದಿಂದ ಹೊರ ಬಂದಿಲ್ಲ. ಅಮ್ಮನ ಅಗಲಿಕೆಯನ್ನು ಅರಗಿಸಿಕೊಳ್ಳಲಾಗದೆ...
ತಮಿಳುನಾಡು ಮಾಜಿ ಮುಖ್ಯಮಂತ್ರಿ ಜೆ.ಜಯಲಲಿತಾ
ತಮಿಳುನಾಡು ಮಾಜಿ ಮುಖ್ಯಮಂತ್ರಿ ಜೆ.ಜಯಲಲಿತಾ
Updated on

ಚೆನ್ನೈ: ತಮಿಳುನಾಡು ಮಾಜಿ ಮುಖ್ಯಮಂತ್ರಿ ಜೆ.ಜಯಲಲಿತಾ ಅವರ ಅಕಾಲಿಕ ಸಾವಿನಿಂದ ಆಘಾತಕ್ಕೊಳಗಾಗಿರುವ ತಮಿಳುನಾಡಿನ ಜನತೆ ಈ ವರೆಗೂ ತನ್ನ ದುಃಖದಿಂದ ಹೊರ ಬಂದಿಲ್ಲ. ಅಮ್ಮನ ಅಗಲಿಕೆಯನ್ನು ಅರಗಿಸಿಕೊಳ್ಳಲಾಗದೆ ತಮಿಳುನಾಡಿನಲ್ಲಿ ಸಾವನ್ನಪ್ಪಿದ್ದವರ ಸಂಖ್ಯೆ 470ಕ್ಕೆ ಏರಿಕೆಯಾಗಿದೆ ಎಂದು ವರದಿಗಳಿಂದ ತಿಳಿದುಬಂದಿದೆ.

ಜಯಲಲಿತಾ ಅವರ ಅಭಿಮಾನಿಗಳ ಸಾವು ಕುರಿತಂತೆ ಅಧಿಕೃತವಾಗಿ ಟ್ವಿಟರ್ ನಲ್ಲಿ ಹೇಳಿಕೆಕೊಂಡಿರುವ ಎಐಎಡಿಎಂಕೆ ಪಕ್ಷ, ಅಮ್ಮನ ಸಾವಿನಿಂದಾಗಿ ತಮಿಳುನಾಡು ತೀವ್ರ ಆಘಾತಕ್ಕೊಳಗಾಗಿದ್ದು, ಅಭಿಮಾನಿಗಳ ಸಾವಿನ ಸಂಖ್ಯೆ 470ಕ್ಕೆ ಏರಿಕೆಯಾಗಿದೆ ಎಂದು ಹೇಳಇಕೊಂಡಿದೆ.

ನಿನ್ನೆಯಷ್ಟೇ ಟ್ವಿಟರ್ ನಲ್ಲಿ ಹೇಳಿಕೆಯನ್ನು ಬಿಡುಗಡೆ ಮಾಡಿದ್ದ ಎಐಎಡಿಎಂಕೆ ಪಕ್ಷಕ  ಅಮ್ಮನ ಸಾವಿನ ಸುದ್ದಿ ಕೇಳುತ್ತಿದ್ದಂತೆ ಹೃದಯಘಾತಕ್ಕೊಳಗಾಗಿ 280 ಮಂದಿ ಸಾವನ್ನಪ್ಪಿದ್ದಾರೆಂದು ಹೇಳಿಕೊಂಡಿತ್ತು. ಅಲ್ಲದೆ, ಮೃತಪಟ್ಟ ಜನರ ಕುಟುಂಬಗಳಿಗೆ ತಲಾ ರು.3 ಲಕ್ಷ ಹಣವನ್ನು ಪರಿಹಾರವಾಗಿ ನೀಡುವುದಾಗಿ ಘೋಷಣೆ ಮಾಡಿದ್ದು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com