ಥಾಣೆ: ಕಾಶಿ ಸುಮೇರು ಪೀಠಾಧೀಶ್ವರ ಜಗದ್ಗುರು ಶಂಕಾರಾಚಾರ್ಯ ಸ್ವಾಮಿ ನರೇಂದ್ರಾನಂದ ಸರಸ್ವತಿಯವರು ಮುಕ್ತವಾಗಿ ನರೇಂದ್ರ ಮೋದಿ ಸರ್ಕಾರದ ಅಧಿಕ ಮೌಲ್ಯದ ನೋಟುಗಳ ಅಮಾನ್ಯತೆ ಕ್ರಮವನ್ನು ಸ್ವಾಗತಿಸಿದ್ದಾರೆ. ಆದರೆ ಈ ವಿಷಯದಲ್ಲಿ ಸಂಸತ್ತು ಕಲಾಪಕ್ಕೆ ಅಡ್ಡಿಪಡಿಸುತ್ತಿರುವ ಸಂಸದರ ಬಗ್ಗೆ ಅವರು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.