ಅರುಣಾಚಲ ಪ್ರದೇಶದಲ್ಲಿ ಬೃಹತ್ ಜಲ ವಿದ್ಯುತ್ ಘಟಕ ನಿರ್ಮಾಣವಾಗಲಿದ್ದು ಈ ಸಂಬಂಧ 450 ಕೋಟಿ ರುಪಾಯಿ ಭ್ರಷ್ಟಾಚಾರದಲ್ಲಿ ಕಿರಣ್ ರಿಜಿಜು ಅವರು ಭಾಗಿಯಾಗಿದ್ದಾರೆ ಎಂಬ ಗಂಭೀರ ಆರೋಪವನ್ನು ಕಾಂಗ್ರೆಸ್ ಮಾಡಿತ್ತು. ಅಲ್ಲದೆ ಕಿರಣ್ ರಿಜಿಜು ಅವರು ಭ್ರಷ್ಟಾಚಾರದಲ್ಲಿ ಭಾಗಿಯಾಗಿರುವ ಬಗ್ಗೆ ಆಡಿಯೋ ಸಾಕ್ಷ್ಯಗಳು ಲಭಿಸಿರುವುದರಿಂದ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಬೇಕು ಎಂದು ಕಾಂಗ್ರೆಸ್ ಆಗ್ರಹಿಸಿತ್ತು.