ನವದೆಹಲಿ: ದೇಶದಲ್ಲಿ ಕಪ್ಪು ಹಣ ಸಂಗ್ರಹವನ್ನು ಕೊನೆಗಾಣಿಸಲು, ಭ್ರಷ್ಟಾಚಾರ, ನಕಲಿ ನೋಟುಗಳ ಹಾವಳಿಯನ್ನು ತಡೆಗಟ್ಟಲು ನವೆಂಬರ್ 8ರಂದು ಘೋಷಣೆ ಮಾಡಿದ ಅನಾಣ್ಯೀಕರಣ ಯೋಜನೆಯ ಪ್ರಕ್ರಿಯೆಗಳನ್ನು ಕೇಂದ್ರ ಸರ್ಕಾರ ಪೂರ್ಣಗೊಳಿಸಲಿದೆ. ಇನ್ನು ಮೂರು ವಾರಗಳಲ್ಲಿ ಗಮನಾರ್ಹ ಪ್ರಮಾಣದಲ್ಲಿ ಹಣವನ್ನು ಬ್ಯಾಂಕುಗಳಿಗೆ ಪೂರೈಸಲಾಗುವುದು ಎಂದು ಹಣಕಾಸು ಸಚಿವ ಅರುಣ್ ಜೇಟ್ಲಿ ಹೇಳಿರುವುದಾಗಿ ಎಎನ್ಐ ಸುದ್ದಿಸಂಸ್ಥೆ ವರದಿ ಮಾಡಿದೆ.