ಮಹಾರಾಷ್ಟ್ರದ ಮರಾಠವಾಡ ಪ್ರದೇಶದಲ್ಲಿ ಮಾತನಾಡಿರುವ ಅಸಾವುದ್ದೀನ್ ಒವೈಸಿ, ಮುಸ್ಲಿಮರಿರುವ ಪ್ರದೇಶಗಳಲ್ಲಿ ಬ್ಯಾಂಕಿಂಗ್ ನೆಟ್ವರ್ ನ ಕೊರತೆ ಇದೆ. ಮುಸ್ಲಿಮರು ಇರುವ ಹಲವು ಪ್ರದೇಶಗಳಲ್ಲಿ ಬ್ಯಾಂಕ್ ಗಳು ಸಹಜವಾಗಿ ಇರಬೇಕಾದ ಸ್ಥಿತಿಯಲ್ಲಿ ಇಲ್ಲ. ಬೇರೆ ಪ್ರದೇಶಗಳಿಗೆ ಹೋಲಿಸಿದರೆ ಬ್ಯಾಂಕ್ ಗಳಲ್ಲಿ ನೀಡಲಾಗುವ ಸಾಲದ ಪ್ರಮಾಣವೂ ಕಡಿಮೆ ಇದೆ ಎಂದು ಒವೈಸಿ ಆರೋಪಿಸಿದ್ದಾರೆ.