ಸಿಂಧೂ ನದಿ ಒಪ್ಪಂದವನ್ನು ದ್ವಿಪಕ್ಷೀಯ ಮಾತುಕತೆ ಮೂಲಕ ಬಗೆಹರಿಸಿಕೊಳ್ಳಬೇಕು: ಪಾಕಿಸ್ತಾನಕ್ಕೆ ಭಾರತ ಸಲಹೆ

56 ವರ್ಷಗಳ ಹಿಂದಿನ ಸಿಂಧೂ ನದಿ ನೀರು ಒಪ್ಪಂದ ಕುರಿತಂತೆ ತಲೆದೋರಿರುವ ಸಮಸ್ಯೆಗಳನ್ನು ದ್ವಿಪಕ್ಷೀಯ ಮಾತುಕತೆಗಳ ಮೂಲಕ
ವಿಕಾಸ್ ಸ್ವರೂಪ್
ವಿಕಾಸ್ ಸ್ವರೂಪ್
Updated on

ನವದೆಹಲಿ: 56 ವರ್ಷಗಳ ಹಿಂದಿನ ಸಿಂಧೂ ನದಿ ನೀರು ಒಪ್ಪಂದ ಕುರಿತಂತೆ ತಲೆದೋರಿರುವ ಸಮಸ್ಯೆಗಳನ್ನು ದ್ವಿಪಕ್ಷೀಯ ಮಾತುಕತೆಗಳ ಮೂಲಕ ಬಗೆಹರಿಸಿಕೊಳ್ಳಬೇಕು ಎಂದು ಪಾಕಿಸ್ತಾನಕ್ಕೆ ಭಾರತ ಸಲಹೆ ನೀಡಿದೆ.

ಕಿಶನ್ ಗಂಗಾ ಮತ್ತು ರಾಟ್ಲೆ ಯೋಜನೆಗಳ ವಿವಾದವನ್ನು ಪ್ರತ್ಯೇಕವಾಗಿ ಬಗೆಹರಿಸಿಕೊಳ್ಳಬೇಕು ಎಂದು ವಿಶ್ವಬ್ಯಾಂಕ್ ಘೋಷಿಸಿದ ನಂತರ ಭಾರತ ಪಾಕಿಸ್ತಾನಕ್ಕೆ ಸಲಹೆ ನೀಡಿದೆ.

ಕಿಶನ್ ಗಂಗಾ ಯೋಜನೆಗೆ ಪಾಕಿಸ್ತಾನ ಯಾಕೆ ಅಡ್ಡಗಾಲು ಹಾಕುತ್ತಿದೆ, ಅದಕ್ಕಿರುವ ತಾಂತ್ರಿಕ ಕಾರಣ ಏನು ಎಂಬುದು ಅರ್ಥವಾಗುತ್ತಿಲ್ಲ. ಈ ಸಮಸ್ಯೆ ಬಗೆಹರಿಸಲು ಎರಡು ಕಡೆಯ ತಜ್ಞರ ಸಲಹೆ ಪಡೆದುಕೊಳ್ಳಬೇಕು ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ವಿಕಾಸ್ ಸ್ವರುಪ್ ತಿಳಿಸಿದ್ದಾರೆ.

ಸಿಂಧೂ ನದಿ ಒಪ್ಪಂದದ ನೀತಿ ನಿಯಮಗಳನ್ನು ಅನುಷ್ಠಾನ ಗೊಳಿಸುವಲ್ಲಿ ಭಾರತಕ್ಕೆ ಯಾವಾಗಲು ನಂಬಿಕೆಯಿದೆ. ತಾಂತ್ರಿಕ ಕಾರಣಗಳು ಹಾಗೂ ಎರಡು ದೇಶಗಳ ನಡುವೆ ಇರುವ ವ್ಯತ್ಯಾಸಗಳನ್ನು ಮಾತುಕತೆ ಮೂಲಕ ಬಗೆಹರಿಸಿಕೊಳ್ಳಬೇಕು ಎಂದು ಅವರು ಹೇಳಿದ್ದಾರೆ.

ದ್ವಿಪಕ್ಷೀಯ ಮಾತುಕತೆಗಳ ಮೂಲಕ ಸಮಸ್ಯೆಗಳನ್ನು ಬಗೆಹರಿಸಿಕೊಂಡಿರುವ ಉದಾಹರಣೆ ನಮ್ಮ ಕಣ್ಣ ಮುಂದಿವೆ.ಹೀಗಾಗಿ  ಈ ಸಮಸ್ಯೆಯನ್ನು ಕೂಡ ಅದೇ ರೀತಿ ಬಗೆಹರಿಸಿಕೊಳ್ಳಬೇಕು ಎಂದು ಅವರು ಬಲವಾಗಿ ಪ್ರತಿಪಾದಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com