ನವದೆಹಲಿ: ಭಯೋತ್ಪಾದನೆ ಹಾಗೂ ಭ್ರಷ್ಟರ ಪರವಾಗಿ ವಿಪಕ್ಷಗಳು ಹೋರಾಟ ನಡೆಸುತ್ತಿವೆ ಎಂದು ಕೇಂದ್ರ ನಗರಾಭಿವೃದ್ಧಿ ಸಚಿವ ವೆಂಕಯ್ಯ ನಾಯ್ಡು ಆರೋಪಿಸಿದ್ದಾರೆ.
ಮೊದಲು ವಿರೋಧ ಪಕ್ಷಗಳು ಭ್ರಷ್ಟಾಚಾರದ ವಿರುದ್ಧ ದನಿ ಎತ್ತುತ್ತಿದ್ದವು, ಆಗ ಆಡಳಿತ ಪಕ್ಷ ಅದನ್ನು ಹತ್ತಿಕ್ಕುತ್ತಿತ್ತು, ಆದರೆ ಈಗ ಭ್ರಷ್ಟಾಚಾರ ಮತ್ತು ಕಪ್ಪು ಹಣದ ವಿರುದ್ಧ ಸರ್ಕಾರದ ಹೋರಾಟಕ್ಕೆ ವಿಪಕ್ಷಗಳು ತಡೆ ಒಡ್ಡುತ್ತಿದ್ದು, ಭಯೋತ್ಪಾದಕರು ಮತ್ತು ಭ್ರಷ್ಟಾಚಾರದ ಪರವಾಗಿ ನಿಂತಿವೆ ಎಂದು ನಾಯ್ಡು ಆರೋಪಿಸಿದ್ದಾರೆ.
ಅನಾಣ್ಯೀಕರಣವನ್ನು ಸಮರ್ಥಿಸಿಕೊಂಡ ವೆಂಕಯ್ಯ ನಾಯ್ಡು, ಇದೊಂದು ಐತಿಹಾಸಿಕ ಹಾಗೂ ದಿಟ್ಟ ನಿರ್ಧಾರ ಎಂದು ಹೇಳಿದ್ದಾರೆ. ಸರ್ಕಾರ ಭ್ರಷ್ಟಾಚಾರ ಹಾಗೂ ಕಪ್ಪು ಹಣದ ವಿರುದ್ಧ ಹೋರಾಟ ನಡೆಸುತ್ತಿದೆ, ಆದರೆ ವಿರೋಧ ಪಕ್ಷಗಳು ಭ್ರಷ್ಟರ ಬೆಂಬಲಕ್ಕೆ ನಿಲ್ಲುತ್ತಿವೆ ಎಂದು ಆಪಾದಿಸಿದ್ದಾರೆ.
Advertisement